ಹೆಚ್.ವೈ. ಮೇಟಿಯವರ ಆತ್ಮಕ್ಕೆ ಶಾಂತಿ ದೊರೆಯಬೇಕಾದರೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ ಜನರು ಉಮೇಶ್ ಮೇಟಿಯವರಿಗೆ ಆಶೀರ್ವದಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಸಪ್ತಸಾಗರ ವಾರ್ತೆ,ಬಾಗಲಕೋಟೆ,ಮಾ.23:ಮಾಜಿ ಶಾಸಕ ದಿವಂಗತ ಹೆಚ್. ವೈ. ಮೇಟಿಯವರಿಗೆ ಗೌರವ, ಅವರ ಆತ್ಮಕ್ಕೆ ಶಾಂತಿ ದೊರೆಯಬೇಕಾದರೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ ಜನರು ಉಮೇಶ್ ಮೇಟಿಯವರಿಗೆ ಆಶೀರ್ವದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಸೋಮವಾರ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಯವರ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದು ನಂತರ ಕಾರ್ಯಕರ್ತರುಗಳನ್ನು ಉದ್ದೇಶಿಸಿ ಮಾತನಾಡಿದರು. ಮೇಟಿಯವರು ಜಾತ್ಯತೀತ ವ್ಯಕ್ತಿರಾಜ್ಯದಲ್ಲಿ ಎರಡು ಉಪಚುನಾವಣೆಗಳು ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ನಡೆಯುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ…


