ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ ಬಗ್ಗೆ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 13:ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ, ತಾಲ್ಲೂಕು ಮಟ್ಟದಲ್ಲಿ ರಿಂಗ್ ರಸ್ತೆ ಗ್ರಿಡ್ ನಿರ್ಮಾಣ, ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ, ಯುವ ಯುಗ ಸ್ಥಾಪನೆ, ನಕಲಿ ಫೈನಾನ್ಸ್ ಸ್ಕೀಂ, ರೌಡಿಗಳು ಹಾಗೂ ಡ್ರಗ್ಸ್ ಜಾಲ ನಿಗ್ರಹ, ಗ್ರಾಮೀಣ ಶಿಕ್ಷಣಕ್ಕೆ ಸಿಎಸ್ಆರ್ ನೀತಿ ರಚನೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ…


