ಕ್ರಿಕೆಟ್ ಒಗ್ಗಟ್ಟು ಮತ್ತು ಕ್ರೀಡಾ ಮನೋಭಾವ ಬೆಳೆಸುತ್ತದೆ: ಸುನೀಲಗೌಡ ಪಾಟೀಲ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24:ಕ್ರಿಕೆಟ್ ಕ್ರೀಡೆಯು ತಂಡವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರ ಪಟ್ಟಣದಲ್ಲಿ ದಿ. ಬಿ.ಎಂ. ಪಾಟೀಲ ಸ್ಮರಣಾರ್ಥ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಅನ್ನು ಮಂಗಳವಾರ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ದಿ. ಬಿ.ಎಂ. ಪಾಟೀಲ ಅವರು ಶಿಕ್ಷಣ ಪ್ರೇಮಿಯಾಗಿದ್ದು, ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯುವಂತೆ…


