
ಅಕ್ರಮ ಸಿಲಿಂಡರ್ ಅಡ್ಡೆ ಮೇಲೆ ದಾಳಿ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ನಗರದ ಅತಾವುಲ್ಲಾ ಚೌಕ್ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳಿಂದ ಆಟೋಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಅಕ್ರಮ ಸಿಲಿಂಡರ್ ಗಳನ್ನು ವಶಪಡಿಸಿಕೊಂಡರು.1 ತುಂಬಿದ ಅಡುಗೆ ಅನಿಲ ಸಿಲಿಂಡರ್ ಹಾಗೂ 3 ಖಾಲಿ ಸಿಲಿಂಡರ್ ಗಳನ್ನು, ಮತ್ತು ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…