ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ವೀರೇಂದ್ರ ಹೆಗಡೆಯವರ ಕಾರ್ಯ ಸಮಾಜಕ್ಕೆ ಮಾದರಿ:ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ಡಾ. ಪರಮ ಪೂಜ್ಯ ಡಿ. ವೀರೇಂದ್ರ ಹೆಗಡೆಯವರು ಮದ್ಯ ವ್ಯಸನಿಗಳ ಮುಕ್ತ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜನೆ ಮಾಡಿ ಸಾಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಬುಧವಾರ ಓಂ ಶ್ರೀ ಮಂಜುನಾಥಯ ನಮಃ ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ಜು. 18ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…

Read More

ಆಗಸ್ಟ್ 2,3 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಅಸ್ಮಿತಾ ವುಶು ಲೀಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಆಗಸ್ಟ್ 2 ಹಾಗೂ 3ರಂದು ಕರ್ನಾಟಕ ರಾಜ್ಯ ವುಶು ಸಂಸ್ಥೆಯ ವತಿಯಿಂದ, ದಾವಣಗೆರೆಯಲ್ಲಿ ಸಬ್ ಜ್ಯೂನಿಯರ್, ಜೂನಿಯರ್, ಬಾಲಕಿಯರ ಮತ್ತು ಮಹಿಳೆಯರ ವುಶು ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ರಾಜ್ಯ ವುಶು ಸಂಸ್ಥೆಯು ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ವುಶು ಒಕ್ಕೂಟದಿಂದ ಮಾನ್ಯತೆ ಪಡೆದ ವುಶು ಕ್ರೀಡೆಯಾಗಿದೆ. ವುಶು ಕ್ರೀಡೆಯು ದಸರಾ ಕ್ರೀಡಾಕೂಟದಲ್ಲಿ, ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ, ವಿಶ್ವ ವಿದ್ಯಾಲಯ ಕ್ರೀಡಾಕೂಟದಲ್ಲಿ,…

Read More

ಶಸ್ತ್ರ ಚಿಕಿತ್ಸೆ ಗಾಯ ಗುಣಪಡಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ…

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More

ಜು. 14ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಡಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.14 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಮಧ್ಯಾಹ್ನ 12-05ಕ್ಕೆ ಸೊಲ್ಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‍ಗೆ ಪೂಜೆ ಸಲ್ಲಿಸಲಿದ್ದಾರೆ.ಮಧ್ಯಾಹ್ನ 1-15ಕ್ಕೆ ಇಂಡಿ ಪೊಲೀಸ್ ಪರೇಡ್…

Read More

ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ:ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವ ಭರವಸೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.ರಾಜ್ಯದ…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More