ಮಹಿಳೆಯಿಂದ ಯುವಕನ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 17:ಮಹಿಳೆಯೊಬ್ಬಳು ಯುವಕನನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ನಗರದ ಜುಮ್ಮಾ ಮಸೀದಿ ಬಳಿಯ ಅಮನ್ ಕಾಲೋನಿಯಲ್ಲಿ ನಡೆದಿದೆ.ಸಮೀರ್ ಉರ್ಫ ಪಿಕೆ ಇನಾಂದಾರ್ (26) ಕೊಲೆಯಾದ ಯುವಕ.ಲೀವಿಂಗ್ ರಿಲೇಷನ್ ನಲ್ಲಿದ್ದ ಮಹಿಳೆಯಿಂದ ಪ್ರಿಯಕರನ‌ ಕೊಲೆ ನಡೆದಿದ್ದು, ಸಹೋದರನ‌ ಸಹಾಯದಿಂದ ಲೀವಿಂಗ್ ರಿಲೇಷನ್ ನಲ್ಲಿದ್ದ ವ್ಯಕ್ತಿಯ ಕೊಲೆಯಾಗಿದೆ. ತಯ್ಯಬಾ ಬಾಗವಾನ್ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದೆ.ತಯ್ಯಾಬಾ ಸಹೋದರಅಸ್ಲಮ್ ಬಾಗವಾನ್ ಸಹಾಯದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ಸಮೀರ್ ನ ಕಿರುಕುಳದಿಂದ ಬೇಸತ್ತು ಮಹಿಳೆ…

Read More

ವೃಕ್ಷೋಥಾನ್ ರನ್-ನೋಂದಣಿಗೆ ನವೆಂಬರ್ 19 ಕೊನೆಯ ದಿನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13: ವೃಕ್ಷೋಥಾನ್ ಹೆರಿಟೇಜ್ ರನ್ ಆರನೇ ಆವೃತ್ತಿ ಬರುವ ಡಿಸೆಂಬರ್ 7 ರಂದು ಜರುಗಲಿದ್ದು, ನೋಂದಣಿ ಮಾಡಿಕೊಳ್ಳಲು ನವೆಂಬರ್ 19 ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಂಘಟಕ, ವಿಜಯಪುರ ಸೈಕ್ಲಿಂಗ್ ಗ್ರುಪ್ ಅಧ್ಯಕ್ಷ ಡಾ.ಮಹಾಂತೇಶ ಬಿರಾದಾರ ಹೇಳಿದರು.ವಿಜಯಪುರದಲ್ಲಿ ಬುಧವಾರ ಸಂಜೆ ನಡೆದ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 11 ಸಾವಿರಕ್ಕೂ ಹೆಚ್ಚು ಓಟಗಾರರು ನೋಂದಣಿ ಮಾಡಿಸಿಕೊಂಡಿದ್ದು, ನೋಂದಣಿಗೆ ಕೊನೆಯ 5 ದಿನಗಳು ಮಾತ್ರ ಉಳಿದಿದ್ದು,…

Read More

ಮೌಲಾನಾ ಅಬ್ದುಲ್ ಕಲಾಂ ಅಜಾದ್ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜಯಂತಿಯ ಪ್ರಯುಕ್ತ ಹೊನ್ನುಟಗಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಹಾಗೂ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಜಾದ್ ಅವರ ಶಿಕ್ಷಣ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಪ್ರಾಂಶುಪಾಲ ದಿವಾಕರ್ ಮಾತನಾಡಿ, ಮೌಲಾನಾ ಅಜಾದ್ ಅವರ ಜೀವನ, ಅವರ ಶಿಕ್ಷಣದ ದೃಷ್ಟಿಕೋನ ಹಾಗೂ ಯುವ ಪೀಳಿಗೆಯು…

Read More

ಮೀನುಮರಿಗಳ ಮಾರಾಟ

ಸಪ್ತಸಾಗರ ವಾರ್ತೆ ವಿಜಯಪುರ, ನ.10: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ನ. 14ರಂದು ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9945959704,9900776205 ಸಂಪರ್ಕಿಸಬಹುದಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೀನುಗಾರಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕ್ಯಾಂಪಸ್ ಸಂದರ್ಶನ:11 ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ 11 ಜನ ವಿದ್ಯಾರ್ಥಿಗಳು ನವೆಂಬರ್ 8 ಮತ್ತು 9 ರಂದು ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ತುಮಕೂರಿನ ವೆಕ್ಸಪೋರ್ಡ್ ಲ್ಯಾಬೋರೇಟರೀಸ್ ಸಹಯೋಗದಲ್ಲಿ ಕ್ಯಾಂಪಸ್ ಡ್ರೈವ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿ. ಫಾರ್ಮಾ, ಎಂ. ಫಾರ್ಮಾ ಪದವೀಧರರು‌‌ ಮತ್ತು ಸ್ಕೂಲ್ ಆಪ್ಲೈಡ್ ಸಾಯಿನ್ಸ್ ಆ್ಯಂಡ್…

Read More

ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More

10ರಂದು ಶಿವ ಚಿದಂಬರ ಜಯಂತ್ಯುತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8 : ವಿಜಯಪುರದ ಚಿದಂಬರ ನಗರದಲ್ಲಿರುವ ಶ್ರೀ ಚಿದಂಬರ ದೇವಾಲಯದಲ್ಲಿ ಇದೇ ದಿನಾಂಕ ೧೦ ರಂದು ಶ್ರೀ ಶಿವಚಿದಂಬರ ಜಯಂತೋತ್ಸವ ನಡೆಯಲಿದೆ.ಶ್ರೀ ಚಿದಂಬರ ಸೇವಾ ಸಮಿತಿ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ.ಅಂದು ಬೆಳಿಗ್ಗೆ ೬ ಕ್ಕೆ ಕಾಕಡಾರತಿ, ಬೆಳಿಗ್ಗೆ ೭ ಕ್ಕೆ ರಜತ ನಾಗಭೂಷಣ, ನಂತರ ಶ್ರೀ ಶಿವಚಿದಂಬರೇಶ್ವರರಿಗೆ ಅಭಿಷೇಕ ನಡೆಯಲಿದೆ.ನಂತರ ಸುವರ್ಣ ಮಹೋತ್ಸವ ಪ್ರಯುಕ್ತ ಆರು ಕೋಟಿ ಶ್ರೀ ಶಿವ ಚಿದಂಬರ ನಾಮಜಪ ಸಂಕಲ್ಪ…

Read More