ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12:ದ್ರಾಕ್ಷಿ ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ರೈತ ಸಂಘ ಶುಕ್ರವಾರ ಮನವಿ ಸಲ್ಲಿಸಿತು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ಇಡೀ ಕರ್ನಾಟಕದಲ್ಲಿ ಅಂದಾಜು 1 ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ. ವಿಜಯಪುರ ಜಿಲ್ಲೆಯಲ್ಲಿಯೇ ಶೇ. 70ರಷ್ಟು ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ 15-20 ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ. ಆದರೆ ದಲ್ಲಾಳಿಗಳ…

Read More

ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. ೧೧:ವಿಜಯಪುರ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸಹಕಾರಿ ಸಹಭಾಗಿತ್ವದಲ್ಲೇ ಸ್ಥಾಪಿಸಬೇಕು. ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುವುದನ್ನು ವಿರೋಧಿಸಿ ಗುರುವಾರ ಸಾವಿರಾರು ವಿದ್ಯಾರ್ಥಿಗಳು ಜನಾಂದೋಲನ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ರ್ಯಾಲಿ ನಗರದ ಶಿವಾಜಿ ವೃತ್ತದಿಂದ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟ ನಡೆಸಿ ಮನವಿ ಸಲ್ಲಿಸಲಾಯಿತು.ಈ ಹೋರಾಟವನ್ನು ಉದ್ದೇಶಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ಕಳೆದ ೨೦ ವರ್ಷಗಳಿಂದ ಡಿವಿಪಿ…

Read More

ಮಹಿಂದ್ರಾ ಬೋಲೆರೋ ವಾಹನ ಹಸ್ತಾಂತರ

ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 10:ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ಮಂಜೂರಿಸಲಾದ ರೂ.11 ಲಕ್ಷ ಅನುದಾನದಲ್ಲಿ ಖರೀದಿಸಲಾದ ನೂತನ ಮಹಿಂದ್ರಾ ಬೋಲೆರೋ ವಾಹನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ವಾಹನ ಸಾರಿಗೆ ವಿಭಾಗ, ಆರಕ್ಷಕ ನಿರೀಕ್ಷಕರು, ಡಿಎಆರ್ ವಿಜಯಪುರ ಅವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿಗಳಾದ ಸುನೀಲ ಕಾಂಬ್ಳೆ, ಮುರಗೆಪ್ಪ ಉಪಾಸೆ, ಸಿಪಿಐ ಗಳಾದ ರವಿ ಯಡವಣ್ಣವರ, ರಾಯಗೊಂಡ ಜಾನವಾರ, ಪರಶುರಾಮ ಮನಗೂಳಿ, ಪಿ.ಎಸ್.ಐ ಯತಿಂದ್ರ, ಆರ್.ಪಿ.ಐ ಈರಸಂಗಪ್ಪ…

Read More

ವ್ಯಕ್ತಿಯ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 10:ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಅಲಮೇಲ ಪಟ್ಟಣದಲ್ಲಿ ನಡೆದಿದೆ.ಅಜರುದ್ದೀನ್ ಅಬ್ದುಲ್ ರಜಾಲ್ ಮಕಾನದಾರ್ (38) ಕೊಲೆಯಾದ ವ್ಯಕ್ತಿ.ಅಜರುದ್ದೀನ್ ಬೈಕ್ ಮೇಲೆ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವ ಉಂಟಾಗಿ ಅಜರುದ್ದೀನ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.ನೆರೆಯ ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ ಅಜರುದ್ದೀನ್ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9 :ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ನಿರ್ಮಾಣ ಕೈ ಬಿಟ್ಟು ಪೂರ್ಣ ಪ್ರಮಾಣದ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ ಮಾರ್ಗವಾಗಿ ಸಾಗಿದ ರ‍್ಯಾಲಿಯಲ್ಲಿ ನೂರಾರು ವಿದ್ಯಾರ್ಥಿಗಳು `ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು, ಪಿಪಿಪಿ ಮಾದರಿ ಕೈಬಿಡಿ ಎಂದು ಘೋಷಣೆ ಕೂಗಿದರು.ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಹೋರಾಟ ಸಮಿತಿ ಸದಸ್ಯ…

Read More

ರಿಯಾಯಿತಿ ದರದಲ್ಲಿ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ನಾಳೆ ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 17ರ ವರೆಗೆ ಆರು ದಿನಗಳ ಕಾಲ ಪುರುಷರಲ್ಲಿ ಸಂತಾನ ಹೀನತೆ ಮತ್ತು ಪುರುಷರ ವೀರ್ಯದಲ್ಲಿನ ಸಮಸ್ಯೆಗೆ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಸಮಸ್ಯೆ ಎದುರಿಸುತ್ತಿರುವ ಪುರುಷರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 8073518596 ಕ್ಕೆ ಸಂಪರ್ಕಿಸಬಹುದಾಗಿದೆ, ಎಂದು ಕಾಲೇಜಿನ ಪ್ರಾಚಾರ್ಯ…

Read More

ಕೋಟ್ಪಾಕಾಯ್ದೆಪರಿಣಾಮಕಾರಿಅನುಷ್ಠಾನಕ್ಕೆಜಿಲ್ಲಾಧಿಕಾರಿಡಾ. ಆನಂದ.ಕೆಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9:ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಕಾರ್ಯಕ್ರಮದ 2025-26ನೇ ಸಾಲಿನ ಎರಡನೇ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯವರು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಯ…

Read More

ಧರ್ಮಸ್ಥಳ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ಮಾಹಿತಿ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 9: ಜಿಲ್ಲೆಯ ತಾಳಿಕೋಟೆಯ ವಿಠ್ಠಲ್ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ತಾಲ್ಲೂಕಿನ ಗಣೇಶನಗರ ವಲಯದ 10 ಒಕ್ಕೂಟದ ಪದಾಧಿಕಾರಿಗಳಿಗೆ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ಅವರು ಕಾರ್ಯಾಗಾರ ಉದ್ಘಾಟಿಸಿದರು.ವಲಯ ಮಟ್ಟದಲ್ಲಿ 25 ರಿಂದ 30 ತಂಡಗಳನ್ನು ಒಳಗೊಂಡಂತೆ ಒಂದು ಒಕ್ಕೂಟದಂತೆ 10 ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿದ್ದು. 10 ಒಕ್ಕೂಟದಿಂದ 50 ಜನ ಪದಾಧಿಕಾರಿಗಳು ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ವಿಜಯಪುರ ಜಿಲ್ಲಾ ನಿರ್ದೇಶಕ…

Read More

ಸಮರ್ಪಣಾ ಭಾವನೆಯಿಂದ ಸೇವೆ ಸಲ್ಲಿಸಿ: ಪ್ರೊ. ಸಿ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 8: ವಿದ್ಯಾರ್ಥಿಗಳು ಕಾನೂನು ಶಿಕ್ಷಣವನ್ನು ಶ್ರದ್ದೆಯಿಂದ ಅಧ್ಯಯನ ಮಾಡಿ ಸಮರ್ಪಣೆ ಮನೋಭಾವದಿಂದ ಸೇವೆ ಮಾಡುವ ಮೂಲಕ ನ್ಯಾಯ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸದೀಯ ಸುಧಾರಣೆ ಸಂಸ್ಥೆ(ಕೆ.ಐ.ಎಲ್.ಪಿ.ಏ.ಆರ್) ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಬುಧವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು…

Read More

ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…

Read More