ಮಹಾಪೌರರಾಗಿ ಎಂ.ಎಸ್. ಕರಡಿ, ಉಪ ಮಹಾಪೌರರಾಗಿ ಸುಮಿತ್ರಾ ಜಾಧವ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾಗಿ ಎಂ.ಎಸ್.ಕರಡಿ ಹಾಗೂ ಉಪ ಮಹಾಪೌರರಾಗಿ ಸುಮಿತ್ರಾಜಾಧವ ಆಯ್ಕೆಯಾಗಿದ್ದಾರೆ.ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನವರ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮಹಾಪೌರ ಹಾಗೂ ಉಪ ಮಹಾಪೌರರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಸೋಮವಾರ ಅಧಿಕೃತವಾಗಿ ಘೋಷಿಸಿದರು.ಜನೆವರಿ, ಫೆಬ್ರವರಿ ತಿಂಗಳಲ್ಲಿ ನಡೆದ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಈ ಮುಂಚೆ ಆ.7ರಂದು ಸಭೆ ನಿಗದಿಪಡಿಸಲಾಗಿತ್ತು. ನಂತರ ಈ ದಿನಾಂಕವನ್ನು ಆ. 11ಕ್ಕೆ…

Read More

ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಹರ ಘರ ತಿರಂಗಾ ಯಾತ್ರೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ‍್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ‍್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ‍್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್‌ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…

Read More

ನಂಜನಗೂಡು ರಾಯರ ಮಠದಲ್ಲಿಭಕ್ತಿ ಭಾವದಿಂದ ಪೂರ್ವಾರಾಧನೆ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 10:ಕಲಿಯುಗದ ಕಾಮಧೇನು-ಕಲ್ಪವೃಕ್ಷ ಎಂದೇ ಖ್ಯಾತನಾಮರಾದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರ ಆಜ್ಞಾನುಸಾರವಾಗಿ ಭಾನುವಾರ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಅತ್ಯಂತ ಭಕ್ತಿಪುರಸ್ಸರವಾಗಿ ಆರಂಭಗೊಂಡಿತು.ಇದರ ಅಂಗವಾಗಿ ಸುಪ್ರಭಾತ,ನಿರ್ಮಾಲ್ಯ ವಿಸರ್ಜನೆ, ವೇದ ಪಾರಾಯಣ ಜರುಗಿದವು. ಬಳಿಕ ಬೆಳಿಗ್ಗೆ ಅಷ್ಟೋತ್ತರ ಸಹಿತ ಫಲಪಂಚಾಮೃತಾಭಿಷೇಕ ನಡೆಯಿತು.ಶ್ರೀ ಗುರುಸಾರ್ವಭೌಮರ ಮಹಿಮೆ ಕುರಿತು ಪಂಡಿತ ಮಧ್ವೇಶಾಚಾರ್ಯ ಜೋಶಿ(ಮುತ್ತಗಿ) ಪ್ರವಚನ ನೀಡಿ, ಗುರುಸಾರ್ವಭೌ ಮರು ಕರುಣಾಮಯಿ ಭಕ್ತರು ಭಕ್ತಿಯಿಂದ ಕೇಳಿದ ಎಲ್ಲವನ್ನು ಕರುಣಿಸಬಲ್ಲವರು…

Read More

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ವಿಜಯಪುರ ಮಹಾನಗರ ಪಾಲಿಕೆ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಆ.11ರಂದು ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಿಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಆ.11ರ ಬೆಳಿಗ್ಗೆ 6 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಶಸ್ತ್ರ,…

Read More

ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More

ಡಿಜಿಟಲ್ ಫಾರ್ಮೆಟ್ ನಲ್ಲಿ ಮತದಾರ ಪಟ್ಟಿ ನೀಡುವ ವ್ಯವಸ್ಥೆ ಆಗಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 9:45 ದಿನಗಳಲ್ಲಿಯೇ ಮತದಾರರ ಪಟ್ಟಿ ಡಿಲೀಟ್ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಗೋಲ್ ಮಾಲ್ ಮಾಡಲಾಗಿದೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.ಈಗಾಗಲೇ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿಯ ಗೋಲ್ ಮಾಲ್ ಕುರಿತು ಹೇಳಿದ್ದಾರೆ.ರಾಜ್ಯದಲ್ಲಿ ನಿನ್ನೆ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. ಮಹದೇವಪುರದಲ್ಲಿ…

Read More

ವಿಜಯಪುರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರು ತೀವ್ರ ತೊಂದರೆ ಅನುಭವಿಸಿದ್ದರು. ಈ ಮಧ್ಯೆ ಒಂದು ದಿನ ಮಾತ್ರ ಮಳೆ ನಿಂತು ಜನರು ಸೂರ್ಯನ ಮುಖ ಕಂಡಿದ್ದರು.ಶುಕ್ರವಾರ ಸಂಜೆ ನಗರ ಸೇರಿದಂತೆ ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲ ನಗರದಲ್ಲಿ ಧಾರಾಕಾರ ಮಳೆ ಸುರಿದು…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6:ನಗರದ ಹೊರ ವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್‍ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ…

Read More

ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…

Read More