ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.ಇಸ್ಲಾಂ ಮೂರ್ತಿ…

Read More

ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ: ಕುಲಪತಿ ವಿಜಯಾ ಕಳವಳ

ಸಪ್ತಸಾಗರ ವಾರ್ತೆ, ವಿಜಯಪುರ, ಆ23:“ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು ದುರಂತ ಮತ್ತು ವಿಪರ‍್ಯಾಸ. ಕಾನೂನು ದೌರ್ಜನ್ಯವನ್ನು ಅಪರಾಧವೆಂದು ಘೋಷಿಸಿದರೂ, ಸಮಾಜದಲ್ಲಿ ಮಹಿಳೆಯ ಸುರಕ್ಷತೆ ಇನ್ನೂ ದೊಡ್ಡ ಪ್ರಶ್ನೆಯಾಗಿದೆ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಿಷಾದ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ವಿಶ್ವವಿದ್ಯಾಲಯ ಆವರಣದಲ್ಲಿ…

Read More

ನಂದಿ ಕೂಗು ಅಭಿಯಾನ: ವಿಜಯಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ಬಸವ ತತ್ವದ ವೈಜ್ಞಾನಿಕ ಚಿಂತನೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಂದಿ ಕೂಗು ಅಭಿಯಾನ ಆ. 23 ರಂದು ವಿಜಯಪುರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಪ್ರಾರಂಭಿಸಿದರು. ಪಾದಯಾತ್ರೆಯ ನೇತೃತ್ವ ವಹಿಸಿದ ಬಸವರಾಜ ಬಿರಾದಾರ ಅವರು ಮಾತನಾಡಿ, ಗ್ರಾಮದಲ್ಲಿ ನಂದಿ ಸಂಪತ್ತು ಹೆಚ್ಚಾದರೆ ಬಸವ ತತ್ವ ಹಾಗೂ ಬಸವ ಸಂಸ್ಕೃತಿ ಉಳಿಯುತ್ತದೆ ಎಂದು ಅರ್ಥ. ಇಲ್ಲವಾದರೆ‌ ನಾಶವಾಗುತ್ತಿದೆ ಎಂದು ಅರ್ಥ. ಏಕೆಂದರೆ ಬಸವ ತತ್ವ ನಂದಿ ಸಂಪತ್ತಿನ ಜೀವಂತಿಕೆ ಮೇಲೆ ನಿಂತಿದೆ ಎಂಬುದನ್ನು ಇಂದಿನ…

Read More

ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ…

Read More

ಕುಂಚಗನೂರ ಗ್ರಾಮದ ಬಳಿ ರೈತ ಮೊಸಳೆಗೆ ಹೇಗೆ ಬಲಿಯಾದ ಗೊತ್ತಾ?

ಸಪ್ತಸಾಗರ ವಾರ್ತೆ,ವಿಜಯಪುರ, ಆ. 23:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ರೈತನೊಬ್ಬ ಕೃಷ್ಣಾ ನದಿಯಲ್ಲಿ ಮೊಸಳೆಗೆ ಬಲಿಯಾದ ಅವಘಡ ಶನಿವಾರ ಸಂಭವಿಸಿದೆ.ರೈತ ಮೊಸಳೆಗೆ ಹೇಗೆ ಬಲಿಯಾದ ಎಂಬ ಡಿಟೇಲ್ಸ್ ಇಲ್ಲಿದೆ ನೋಡಿ.ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿಎತ್ತುಗಳ ಮೈ ತೊಳೆಯಲು ಹೋಗಿದ್ದಖಾಸಪ್ಪ‌ ಕಂಬಳಿ (38) ಎಂಬುವನನ್ನು ಮೊಸಳೆ ಎಳೆದುಕೊಂಡು ಹೋಗಿದೆ.ರೈತ ಖಾಸಪ್ಪ ಎತ್ತುಗಳ ಮೈ ತೊಳೆಯುವಲ್ಲಿ ಮೈ ಮರೆತಿದ್ದ. ಇದೇ ವೇಳೆ ಹಸಿವಿನಿಂದ ಚಡಪಡಿಸುತ್ತಿದ್ದ ಮೊಸಳೆ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿತ್ತು. ತಡ…

Read More

ಬಸವನಬಾಗೇವಾಡಿಯಲ್ಲಿಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಬಸವನಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ 12 ಗಂಟೆಗೆ ಬಸವನಬಾಗೇವಾಡಿ ಪುರಸಭೆ ಕಾರ್ಯಾಲಯದ ಸಭಾ ಭವನದಲ್ಲಿ ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬ್ಬುರ್ಗಿ ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷರಾದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಡಿಸಿ ಆನಂದ ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 22: ಆರೋಗ್ಯ ಸೌಕರ್ಯ ಮತ್ತು ವಿವಿಧ ಆರೋಗ್ಯ ಸೌಲಭ್ಯ ಒದಗಿಸಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಸುರಕ್ಷತೆಗೆ ಅಗತ್ಯ ಆರೋಗ್ಯ ತಿಳುವಳಿಕೆ ಮೂಡಿಸಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗರ್ಭಿಣಿ…

Read More

ಬಸವನ ಬಾಗೇವಾಡಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ, ಬಸವನಬಾಗೇವಾಡಿ, ಆ. 22:ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ, ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಬಸವೇಶ್ವರ ವೃತ್ತದ ವರೆಗೆ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಅನಂತರ ಬಸವನ ಬಾಗೇವಾಡಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 432 ಪದವಿ ಕಾಲೇಜುಗಳಲ್ಲಿ 6,000 ಕಾಯಂ…

Read More

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಭೀತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ‌ 1.80 ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.ಇದರಿಂದಾಗಿ ಕರ್ನಾಟಕದ ವಿಜಯಪುರ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾಂದಾರ್ ಕಂ ಬ್ರಿಡ್ಜ್ ಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹೀಗಾಗಿ ಮಹಾರಾಷ್ಟ್ರಕರ್ನಾಟಕ ಸಂಪರ್ಕ ಕಡಿತವಾಗಿದೆ.ಚಡಚಣ ತಾಲೂಕಿನಲ್ಲಿ ಬರುವಉಮರಜ – ಭಂಡಾರಕವಟೆ,ಶಿರನಾಳ – ಔಜ್, ಉಮರಾಣಿ – ಸಹದೇವಪುರ ಬಾಂದಾರ್ ಕಂ ಬ್ರಿಡ್ಜ್ ಮುಳುಗಡೆಯಾಗಿವೆ.ಇಂಡಿ ತಾಲೂಕಿನ…

Read More

ಮನೆಗೆ ನುಗ್ಗಿದ ಉಡಾ: ನಿವಾಸಿಗಳಿಗೆ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಭಾರಿ ಗಾತ್ರದ ಉಡಾವೊಂದು ಮನೆಗೆ ನುಗ್ಗಿದ್ದರಿಂದ ಮನೆಯವರು ಆತಂಕಕ್ಕೀಡಾದ ಘಟನೆ ನಗರದ ಕೀರ್ತಿ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.ಕೀರ್ತಿ ನಗರದ ನಿವಾಸಿ ಆರ್.ಎಂ. ಬಿರಾದಾರ ಎಂಬುವರ‌ ಮನೆಯ ಶೌಚಾಲಯಕ್ಕೆ ಭಾರಿ ಗಾತ್ರದ ಉಡಾ ನುಳಿಸಿದ್ದರಿಂದ ಮನೆಯವರು ಗಾಬರಿಯಿಃದ ಆತಂಕಗೊಂಡರು.ಮೊಸಳೆ ಆಕಾರದ ಸರಿಸೃಪವನ್ನು ಉಡಾ ಎಂದು ಕರೆಯುತ್ತಾರೆ.ನಗರದಲ್ಲಿ ಇತ್ತೀಚೆಗೆ ಸುರಿದಿದ್ದ ಸತತ ಮಳೆಯಿಂದ ಉಡಾ ಬಿಲದಿಂದ ಹೊರ ಬರುತ್ತಿವೆ.ಸರಿಸೃಪ ಪ್ರಾಣಿಗಳು ಬಿಸಿ ಪ್ರದೇಶಗಳಿಗೆ ವಲಸೆಗೊಂಡು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಗಾಬರಿಗೊಂಡಿದ್ದು, ಸಂಬಂಧಿಸಿದ ಇಲಾಖೆಯವರು ಸಾರ್ವಜನಿಕರ…

Read More