ದೋಷರಹಿತ-ಅಪಘಾತ ರಹಿತ ಹೆಸ್ಕಾಂಗೆ ಕ್ರಮ- ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದ್ರಿ ಅವರು ಹೇಳಿದರು.ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7…

Read More

ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ…

Read More

ತಾಳಿಕೋಟೆಯಲ್ಲಿ ಕಳ್ಳರ ಚಡ್ಡಿ ಗ್ಯಾಂಗ್ ಸಿಸಿ ಕ್ಯಾಮೆರಾದಲ್ಲಿ ಸೆರೆ: ಜನರಲ್ಲಿ ಆತಂಕ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣ ಮೂಡಿಸಿದೆ.ಈ ಹಿಂದೆ ವಿಜಯಪುರ ಜಿಲ್ಲೆಯಲ್ಲಿ ಚಡ್ಡಿ ಗ್ಯಾಂಗ್ ಜನರ ನಿದ್ರೆಗೆಡಿಸಿ ಭಯದ ವಾತಾವರಣ ಮೂಡಿಸಿತ್ತು. ಕೆಲವು ತಿಂಗಳುಗಳಿಂದ ಚಡ್ಡಿ ಗ್ಯಾಂಗ್ ಉಪಟಳ ಇಲ್ಲವಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಈಗ ಮತ್ತೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಗಣೇಶನಗರದಲ್ಲಿಚಡ್ಡಿ ಗ್ಯಾಂಗ್ ಕದೀಮರು ಬಾಲ ಬಿಚ್ಚಿದ್ದಾರೆ. ಈ ಕದೀಮರ ಚಲನವಲನ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ.ಆರು ಜನರು ಇರುವ ಕಳ್ಳರ ಚಡ್ಡಿ ಗ್ಯಾಂಗ್…

Read More

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 24:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹಾಗೂ ಸದಸ್ಯರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ. ಕೆ.ಟಿ. ತಿಪ್ಪೇಸ್ವಾಮಿ, ಮಂಜು, ವೆಂಕಟೇಶ ಹಾಗೂ ಅಪರ್ಣಾ ಎಂ. ಕೊಳ್ಳಾ ಅಧ್ಯಕ್ಷರ ಜೊತೆಗೂಡಿ ಜಿಲ್ಲೆಯ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 25ರಂದು ಬೆಳಿಗ್ಗೆ 9ಗಂಟೆಯಿಂದ 1.30ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಅವರು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ…

Read More

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ: ಆಶಾ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More

ಅರ್ಜುಣಗಿಯಲ್ಲಿ ರೈತ ಆತ್ಮಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 22:ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಶಿವಾಜಿ ಘೋಲಫ (56) ನೇಣಿಗೆ ಶರಣಾದ ರೈತ.ಕೆಬಿಜಿ ಬ್ಯಾಂಕ್ ನಲ್ಲಿ 3 ಲಕ್ಷ ಸಾಲ,ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿಯೂ ಸಾಲ ಮಾಡಿದ್ದ. ಖಾಸಗಿಯವರ ಕಡೆಗೂ ರೈತ ಶಿವಾಜಿ ಸಾಲ ಮಾಡಿದ್ದ.ರೈತ ಶಿವಾಜಿ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 22:ಸಹಕಾರ ಭಾರತಿ ಕರ್ನಾಟಕ ನೂತನ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆಯಾಗಿದ್ದು, ಜು. ೨೫ ರಂದು ನಗರದ ಭಾವಸರ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.ಆಯ್ಕೆಗೊಂಡ ನೂತನ ಜಿಲ್ಲಾಧ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.ಈ ಸಮಾರಂಭವನ್ನು ಸಂಸದ ರಮೇಶ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು,…

Read More

ಶಾಸಕ ಕಾಶಪ್ಪನವರಿಗೆ ಅಂತ್ಯಕಾಲ ಬಂದಿದೆ- ಯತ್ನಾಳ ಕಿಡಿ

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ಶಾಸಕ ವಿಜಯಾನಂದ ಕಾಶಪ್ಪನವರಿಗೆ ಅಂತ್ಯ ಕಾಲ ಬಂದಿದೆ. ಆರುವ ಮುನ್ನ ದೀಪ ಉರಿಯುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ.ವಿಜಯಾನಂದ ಕಾಶಪ್ಪನವರ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿರುವ ವಿಚಾರವಾಗಿ ಸೋಮವಾರ ಸುದ್ದಿಗಾರರ ಜೊತೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ಕಾಶಪ್ಪನವರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು.ಇಡೀ ಸಮಾಜ ಕಾಶಪ್ಪನವರ ಬೆನ್ನಿಗಿಲ್ಲ. ಕಾಶಪ್ಪನವರ ಪೂಜ್ಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.ಕೂಡಲಸಂಗಮ ಸ್ವಾಮೀಜಿ ಸಮಾಜದ ಪರ ಹಾಗೂ 2ಎ ಮೀಸಲಾತಿಗಾಗಿ…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More