ಬೆಳೆ ಹಾನಿ ಕುರಿತು ಒಂದು ವಾರದಲ್ಲಿ ರೈತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ನಡಹಳ್ಳಿ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 19:ರಾಜ್ಯದಲ್ಲಿ ಭಾರೀ ಮಳೆಯಿಂದ ರೈತರ ಬೆಳೆಗಳು ಹಾಳಾಗಿವೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಇತ್ತ ಗಮನ ಹರಿಸುತ್ತಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಿಎಂ ಹಾಗೂ ಸಚಿವರ ನಡೆ ಖಂಡನೀಯ. ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.2019 ರಲ್ಲಿ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದಾಗ ತುರ್ತಾಗಿ ಪರಿಹಾರ ನೀಡಿದ್ದರು.ಆಗ ಯಡಿಯೂರಪ್ಪ ಒಂಟಿಯಾಗಿ 14 ಜಿಲ್ಲೆಗಳ ಪ್ರವಾಹ…

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…

Read More

ಪ್ರತಿ ಗಣೇಶ ಮಹಾಮಂಡಳಿಗೆ ರೂ.5001 ನೆರವು: ಶಾಸಕ ಯತ್ನಾಳ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ ರೂ.5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಘೋಷಣೆ ಮಾಡಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯಲ್ಲಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More

ಗಜಾನನ ಮಹಾಮಂಡಳಿಗಳ ಸಭೆ ಇಂದು

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 16:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಹತ್ತಿರದ ಶಿವಾನುಭವ ಮಂಟಪದಲ್ಲಿ ಅ.16 ರಂದು ಸಂಜೆ 5 ಗಂಟೆಗೆ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ವಿಜಯಪುರ ನಗರದ ಶ್ರೀ ಗಜಾನನ ಮಹಾಮಂಡಳಿಗಳ ಸಭೆ ಹಮ್ಮಿಕೊಳ್ಳಲಾಗಿದೆ.ಕಾರಣ ಎಲ್ಲಾ ಗಜಾನನ ಮಹಾಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಗಣ್ಯರು,…

Read More

ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More

ಮೂರು ದಿನಗಳ ಆಶಾಗಳ ಹೋರಾಟ ಅಂತ್ಯ

ಸಪ್ತಸಾಗರ ವಾರ್ತೆ, ವಿಜಯಪುರ,ಆ.14:ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಮುಕ್ತಾಯಗೊಂಡಿತು.ವಿದ್ಯಾರ್ಥಿ,ಯುವಜನ, ದಲಿತ ಸಂಘಟನೆ, ಸರ್ಕಾರಿ ನಿವೃತ್ತಿ ಅಧಿಕಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ, ಸಿಐಟಿಯು ಕಾರ್ಮಿಕ ಸಂಘಟನೆ ಹಾಗೂ ಜಿಲ್ಲೆಯ ಹಿರಿಯ ಸಾಹಿತಿಗಳಿಂದ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ನಿವೃತ್ತ ಅಧಿಕಾರಿ ಸುರೇಶ ಜೆ.ಬಿ ಮಾತನಾಡಿ, ಕನಿಷ್ಠ ಜೀವನ ನಡೆಸಲು ೧೫೦೦೦ ಸಂಬಳ…

Read More

ವಿಜಯಪುರದಲ್ಲಿ 300 ಮೀಟರ್ ಉದ್ದದ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…

Read More

ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋದ ಸಂದರ್ಭದಲ್ಲಿ ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕದಡುವಂತಿದೆ. ಹಾಗಾಗಿ ಶಾಸಕರ ವಿರುದ್ಧ ಕಾನೂನು…

Read More