ಬೆಳೆ ಹಾನಿ ಕುರಿತು ಒಂದು ವಾರದಲ್ಲಿ ರೈತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ನಡಹಳ್ಳಿ ಎಚ್ಚರಿಕೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 19:ರಾಜ್ಯದಲ್ಲಿ ಭಾರೀ ಮಳೆಯಿಂದ ರೈತರ ಬೆಳೆಗಳು ಹಾಳಾಗಿವೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಇತ್ತ ಗಮನ ಹರಿಸುತ್ತಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಿಎಂ ಹಾಗೂ ಸಚಿವರ ನಡೆ ಖಂಡನೀಯ. ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.2019 ರಲ್ಲಿ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದಾಗ ತುರ್ತಾಗಿ ಪರಿಹಾರ ನೀಡಿದ್ದರು.ಆಗ ಯಡಿಯೂರಪ್ಪ ಒಂಟಿಯಾಗಿ 14 ಜಿಲ್ಲೆಗಳ ಪ್ರವಾಹ…


