ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಎಬಿವಿಪಿ ನಿಯೋಗ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ,ಎಬಿವಿಪಿ ನಿಯೋಗವು ಭೇಟಿ ನೀಡಿತು.ವಿಶ್ವವಿದ್ಯಾಲಯಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಅವರ ಅಂಕ ಪಟ್ಟಿ ಹಾಗೂ ಅವರ ಶೈಕ್ಷಣಿಕ ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹರಿಸಿ ಕೊಡಲು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ವಿಶ್ವವಿದ್ಯಾಲಯಗಳ ಸಂಚಾಲಕ ವಿದ್ಯಾನಂದ ಸ್ಥಾವರಮಠ ಹಾಗೂ ಎಬಿವಿಪಿ ರಾಜ್ಯ ಕಾರ್ಯಕಾರಿಣಿ…

Read More

ಸಂಭ್ರಮದಿಂದ ನಡೆದ ರಾಯರ ಉತ್ತಾರಾರಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಗುರು ಸಾರ್ವಭೌಮರ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಲ್ಲಿನ ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ಗುರು ರಾಯರ ಆರಾಧನಾ ಮಹೋತ್ಸವವು ಮಂಗಳವಾರ ಉತ್ತಾರಾರಾಧನೆ ಮೂಲಕ ಸಂಪನ್ನಗೊಂಡಿತು.ಬೆಳಗ್ಗೆ ಸುಪ್ರಭಾತ, ವಿವಿಧ ಅರ್ಚಕರ ನೇತೃತ್ವದಲ್ಲಿ ರಥಾಂಗ ಹವನ, ಶ್ರೀಹರಿ-ವಾಯುಸ್ತುತಿ ಪುನಶ್ಚರಣ, ಶ್ರೀಗುರುಸ್ತೋತ್ರ ಅಷ್ಟೋತ್ತರ ಶತಃಪಠಣಪೂರ್ವಕ ಶ್ರೀಗುರುಸಾರ್ವಭೌಮರಿಗೆ 108 ಕಲಶದಿಂದ ವಿವಿಧ ಹಣ್ಣು ಹಂಪಲಗಳ ಕ್ಷೀರಾಭಿಷೇಕ ಹಾಗೂ ಮಹಾಪಂಚಾಮೃತಾಭಿಷೇಕ ನೆರವೇರಿಸಲಾಯಿತು.ನಂತರ ಶ್ರೀಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ…

Read More

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಚರ್ಚೆಗೆ ಒಪ್ಪಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 12:ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್…

Read More

ಇಬ್ರಾಹಿಂಪುರ ಸುಸಜ್ಜಿತ ರೈಲು ನಿಲ್ದಾಣ ಕಟ್ಟಡಕ್ಕೆ 1.50 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ,ಆ. 11 : ನಗರದಲ್ಲಿರುವ ಇಬ್ರಾಹಿಂಪೂರ ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು 1.50 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಮಾಹಿತಿ ನೀಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದ ಇಬ್ರಾಹಿಂಪೂರ ಭಾಗದ ಜನತೆಯ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ ಇರಬೇಕು ಎನ್ನುವ ಕಾರಣಕ್ಕೆ ಆಗ ನಿಲ್ದಾಣ ಆರಂಭಿಸಲು ವಿಶೇಷ ಪ್ರಯತ್ನ ವಹಿಸಿ ಯಶಸ್ವಿಯಾಗಿದ್ದೆನು. ಈ ಇಬ್ರಾಹಿಂಪೂರ ರೈಲ್ವೆ ನಿಲ್ದಾಣ…

Read More

ಪಾಲಿಕೆ ನೂತನ ಮೇಯರ್ ಉಪಮೇಯರ್ ಬಿಜೆಪಿ ಕಚೇರಿ ಭೇಟಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 11: ಮಹಾನಗರ. ಪಾಲಿಕೆಯಲ್ಲಿ ಕಮಲ‌ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ಬಿಜೆಪಿ ದೇಶಾಭಿಮಾನ ಉಸಿರಾಗಿಸಿಕೊಂಡ ಪಕ್ಷ, ಈ ಪಕ್ಷದ ಸದಸ್ಯನಾಗಿರುವುದೇ…

Read More

ಮಹಾಪೌರರಾಗಿ ಎಂ.ಎಸ್. ಕರಡಿ, ಉಪ ಮಹಾಪೌರರಾಗಿ ಸುಮಿತ್ರಾ ಜಾಧವ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾಗಿ ಎಂ.ಎಸ್.ಕರಡಿ ಹಾಗೂ ಉಪ ಮಹಾಪೌರರಾಗಿ ಸುಮಿತ್ರಾಜಾಧವ ಆಯ್ಕೆಯಾಗಿದ್ದಾರೆ.ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನವರ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮಹಾಪೌರ ಹಾಗೂ ಉಪ ಮಹಾಪೌರರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಸೋಮವಾರ ಅಧಿಕೃತವಾಗಿ ಘೋಷಿಸಿದರು.ಜನೆವರಿ, ಫೆಬ್ರವರಿ ತಿಂಗಳಲ್ಲಿ ನಡೆದ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಈ ಮುಂಚೆ ಆ.7ರಂದು ಸಭೆ ನಿಗದಿಪಡಿಸಲಾಗಿತ್ತು. ನಂತರ ಈ ದಿನಾಂಕವನ್ನು ಆ. 11ಕ್ಕೆ…

Read More

ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಹರ ಘರ ತಿರಂಗಾ ಯಾತ್ರೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ‍್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ‍್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ‍್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್‌ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…

Read More

ನಂಜನಗೂಡು ರಾಯರ ಮಠದಲ್ಲಿಭಕ್ತಿ ಭಾವದಿಂದ ಪೂರ್ವಾರಾಧನೆ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 10:ಕಲಿಯುಗದ ಕಾಮಧೇನು-ಕಲ್ಪವೃಕ್ಷ ಎಂದೇ ಖ್ಯಾತನಾಮರಾದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರ ಆಜ್ಞಾನುಸಾರವಾಗಿ ಭಾನುವಾರ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಅತ್ಯಂತ ಭಕ್ತಿಪುರಸ್ಸರವಾಗಿ ಆರಂಭಗೊಂಡಿತು.ಇದರ ಅಂಗವಾಗಿ ಸುಪ್ರಭಾತ,ನಿರ್ಮಾಲ್ಯ ವಿಸರ್ಜನೆ, ವೇದ ಪಾರಾಯಣ ಜರುಗಿದವು. ಬಳಿಕ ಬೆಳಿಗ್ಗೆ ಅಷ್ಟೋತ್ತರ ಸಹಿತ ಫಲಪಂಚಾಮೃತಾಭಿಷೇಕ ನಡೆಯಿತು.ಶ್ರೀ ಗುರುಸಾರ್ವಭೌಮರ ಮಹಿಮೆ ಕುರಿತು ಪಂಡಿತ ಮಧ್ವೇಶಾಚಾರ್ಯ ಜೋಶಿ(ಮುತ್ತಗಿ) ಪ್ರವಚನ ನೀಡಿ, ಗುರುಸಾರ್ವಭೌ ಮರು ಕರುಣಾಮಯಿ ಭಕ್ತರು ಭಕ್ತಿಯಿಂದ ಕೇಳಿದ ಎಲ್ಲವನ್ನು ಕರುಣಿಸಬಲ್ಲವರು…

Read More

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ವಿಜಯಪುರ ಮಹಾನಗರ ಪಾಲಿಕೆ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಆ.11ರಂದು ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಿಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಆ.11ರ ಬೆಳಿಗ್ಗೆ 6 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಶಸ್ತ್ರ,…

Read More