ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ಜು. 18ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…

Read More

ಆಗಸ್ಟ್ 2,3 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಅಸ್ಮಿತಾ ವುಶು ಲೀಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಆಗಸ್ಟ್ 2 ಹಾಗೂ 3ರಂದು ಕರ್ನಾಟಕ ರಾಜ್ಯ ವುಶು ಸಂಸ್ಥೆಯ ವತಿಯಿಂದ, ದಾವಣಗೆರೆಯಲ್ಲಿ ಸಬ್ ಜ್ಯೂನಿಯರ್, ಜೂನಿಯರ್, ಬಾಲಕಿಯರ ಮತ್ತು ಮಹಿಳೆಯರ ವುಶು ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ರಾಜ್ಯ ವುಶು ಸಂಸ್ಥೆಯು ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ವುಶು ಒಕ್ಕೂಟದಿಂದ ಮಾನ್ಯತೆ ಪಡೆದ ವುಶು ಕ್ರೀಡೆಯಾಗಿದೆ. ವುಶು ಕ್ರೀಡೆಯು ದಸರಾ ಕ್ರೀಡಾಕೂಟದಲ್ಲಿ, ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ, ವಿಶ್ವ ವಿದ್ಯಾಲಯ ಕ್ರೀಡಾಕೂಟದಲ್ಲಿ,…

Read More

ನಂಜನಗೂಡು ಮಠದಲ್ಲಿ ಜಯತೀರ್ಥರ ಆರಾಧನೆ: ರಥೋತ್ಸವ, ವಿಶೇಷ ಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 16:ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಶ್ರೀ ಜಯತೀರ್ಥರ ಆರಾ ಧನೆಯನ್ನು ಅತ್ಯಂತ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.ತನ್ನಿಮಿತ್ತ ಬೆಳಿಗ್ಗೆ ಗುರುಸಾರ್ವಭೌಮರ ಅಷ್ಟೋತ್ತರ, ಸುಧಾ ಪಾರಾಯಣ, ಬಳಿಕ ವೃಂದಾವನಕ್ಕೆ ಫಲ ಪಂಚಾ ಮೃತ, ಅಲಂಕಾರ, ಮಹಾಪೂಜೆ ಜರುಗಿದವು. ಶ್ರೀ ಜಯತೀರ್ಥರ ಭಾವಚಿತ್ರಕ್ಕೆ ಹೂಮಾಲೆಗಳಿಂದ ಅಲಂಕರಿಸಿ ಶ್ರದ್ಧಾಭಕ್ತಿಯಿಂದ ನಮಿಸಲಾಯಿತು. ಆನಂತರ ಶ್ರೀ ಮಠದ ಒಳಾವರಣದಲ್ಲಿ ಟೀಕಾರಾಯರ ರಚಿಸಿದ ಗ್ರಂಥಗಳನ್ನು ಹಾಗೂ ಭಾವಚಿತ್ರ ಪುಷ್ಪಗಳನ್ನಿಟ್ಟ ಅಲಂಕೃತ ರಥೋತ್ಸವ ಜರುಗಿತು. ರಥೋತ್ಸವ ಸಮಯದಲ್ಲಿ ದೇವರ ನಾಮಗಳ ಸುಮಧುರ…

Read More

17 ರಂದು ಬಾನು ಮುಷ್ತಾಕ್ ಅವರ ಬರಹಗಳ ಕುರಿತು ವಿಚಾರ ಸಂಕಿರಣ.

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಭೂಕರ್ ಪ್ರಶಸ್ತಿ ಪಡೆದ ಡಾ. ಬಾನು ಮುಷ್ಕಾಕ್ ಅವರ ಬರಹಗಳ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜು.17 ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತಿಗಳು ಹಾಗೂ ಡಿವಾಯ್ಎಸ್ಪಿ ಬಸವರಾಜ ಯಲಿಗಾರ ಉದ್ಘಾಟಿಸುವರು.ಸಂಸ್ಥೆಯ ಅಧ್ಯಕ್ಷ ಸಜ್ಜಾದೆ ಪೀರಾ ಮುಶ್ರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಷಯ ನಿರೂಪಕರಾಗಿ ಸಾಹಿತಿಗಳಾದ ಡಾ. ಮುರ್ತುಜಾಬೇಗಂ ಕೊಡಗಲಿ, ಡಾ….

Read More

ಶಸ್ತ್ರ ಚಿಕಿತ್ಸೆ ಗಾಯ ಗುಣಪಡಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ…

Read More

ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ…

Read More

ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನುhttps://swdservice.karnataka.gov.in/PrizeMoneyClientAPP/ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಂಚೆ ಜೀವ ವಿಮೆ ಮಾರಾಟ: ನೇರ ಪ್ರತಿನಿಧಿಗಳ ನೇಮಕ, ನೇರ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜು. 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಆಯ್ಕೆಯಾದ ಅಭ್ಯರ್ಥಿಗಳು 5,000 ರೂ.ಗಳ ರಾಷ್ಟ್ರೀಯ ಉಳಿತಾಯ…

Read More