ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More

ಡಿಜಿಟಲ್ ಫಾರ್ಮೆಟ್ ನಲ್ಲಿ ಮತದಾರ ಪಟ್ಟಿ ನೀಡುವ ವ್ಯವಸ್ಥೆ ಆಗಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 9:45 ದಿನಗಳಲ್ಲಿಯೇ ಮತದಾರರ ಪಟ್ಟಿ ಡಿಲೀಟ್ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಗೋಲ್ ಮಾಲ್ ಮಾಡಲಾಗಿದೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.ಈಗಾಗಲೇ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿಯ ಗೋಲ್ ಮಾಲ್ ಕುರಿತು ಹೇಳಿದ್ದಾರೆ.ರಾಜ್ಯದಲ್ಲಿ ನಿನ್ನೆ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. ಮಹದೇವಪುರದಲ್ಲಿ…

Read More

ವಿಜಯಪುರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರು ತೀವ್ರ ತೊಂದರೆ ಅನುಭವಿಸಿದ್ದರು. ಈ ಮಧ್ಯೆ ಒಂದು ದಿನ ಮಾತ್ರ ಮಳೆ ನಿಂತು ಜನರು ಸೂರ್ಯನ ಮುಖ ಕಂಡಿದ್ದರು.ಶುಕ್ರವಾರ ಸಂಜೆ ನಗರ ಸೇರಿದಂತೆ ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲ ನಗರದಲ್ಲಿ ಧಾರಾಕಾರ ಮಳೆ ಸುರಿದು…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6:ನಗರದ ಹೊರ ವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್‍ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ…

Read More

ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More

ಬಸ್ ಪಲ್ಟಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ಸೋಮವಾರ ಸಂಭವಿಸಿದೆ.ಸಿಂದಗಿಯಿಂದ ಹೊನ್ನಳ್ಳಿಗೆ ತೆರಳುತ್ತಿದ್ದ ಬಸ್ ಹದಗೆಟ್ಟ ರಸ್ತೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಆ.4:ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆ.8ರಿಂದ 12 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.8ರಂದು ಸಂಜೆ ಬೆಳಗಾವಿಯಿಂದ ಜಿಲ್ಲೆಯ ಪಡೇಕನೂರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ಆ.9 ಹಾಗೂ 10ರಂದು ಪರಿಶೀಲನೆ ನಡೆಸುವರು.ಆ.11 ರಂದು ಬೆಳಿಗ್ಗೆ 8-30ಕ್ಕೆ ಪಡೇಕನೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಪಡೇಕನೂರಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡಲಿದ್ದಾರೆ.ಆ.12 ರಂದು ಬೆಳಿಗ್ಗೆ 9…

Read More

ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಪರ ಸ್ಥಳದಿಂದ ಬಂದಂತ ಭಕ್ತಾಧಿಗಳಿಗೆ, ಪ್ರವಾಸಿಗರಿಗೆ, ರುದ್ರಾಭಿಷೇಕ ಮಾಡಿಸುವ ಭಕ್ತಾಧಿಗಳಿಗೆ ನಿತ್ಯ ದಾಸೋಹ ಸೇವೆ ಕಲ್ಪಿಸಲಾಗುತ್ತದೆ. ಪ್ರಾರಂಭೋತ್ಸವ ದಿನದ ದಾಸೋಹ…

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More