ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More

ಪಾಲಿಕೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಶನಿವಾರ ಭೇಟಿ ನೀಡಿ, ಪಾಲಿಕೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ, ಪಾಲಿಕೆ ನೌಕರರ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಿಂದಗಿ ವಿಧಾನಸಭಾ…

Read More

ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ:ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವ ಭರವಸೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.ರಾಜ್ಯದ…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More

ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿಧರಣಿ ಹೋರಾಟ ಕೈಬಿಡುವಂತೆ ಮನವೊಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11 :ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ‌ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು…

Read More

ಯುವಕನ ಶವ ಪತ್ತೆ: ಕೊಲೆ ಶಂಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ಕೊಲೆಯಾದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ತಾಲೂಕಿನ ಅರಕೇರಿ ಬಳಿ ಶುಕ್ರವಾರ ಪತ್ತೆಯಾಗಿದೆ.ಬಿಳಿನಸಿದ್ದ ದುಂಡಪ್ಪ ಒಡೆಯರ್ (33) ಶವವಾಗಿ ಪತ್ತೆಯಾಗಿರುವ ಯುವಕ.ಅರಿಕೇರಿ ಗ್ರಾಮದ ಕರಾಡ ದೊಡ್ಡಿಯ ರಸ್ತೆಯಲ್ಲಿ ಗುಪ್ತಾಂಗ, ಕತ್ತು ಹಾಗೂ ಇತರೆ ಭಾಗಗಳಿಗೆ ಗಾಯಗಳಾಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ಅರಕೇರಿ ಗ್ರಾಮದ ನಿವಾಸಿ ಬಿಳನಸಿದ್ದಅಪರಿಚಿತರಿಂದ ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ಕೊಲೆಯಾದ ಯುವಕನ ಸಂಬಂಧಿಕರ ಆಕ್ರಂದ್ರನ ಮುಗಿಲು ಮುಟ್ಟಿತ್ತು. ಪೊಲೀಸರು ಮುಂದಿನ…

Read More

ಎಲ್ಲರಿಗಿಂತಲೂ ಗುರು ಪರಮ ಶ್ರೇಷ್ಠ: ಕಡ್ಲಿಮಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಹರ ಮುನಿದರೆ ಕಾಯುವ ಗುರು ಎಲ್ಲರಿಗಿಂತ ಪರಮ ಶ್ರೇಷ್ಠನಾಗಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(CBSE) ಶಾಲೆಯಲ್ಲಿ ನಡೆದ ಗುರು ಪೂರ್ಣಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲಿ ತಾಯಿ ಮತ್ತು ಗುರು ಮಾತ್ರ ನಿಷ್ಕಲ್ಮಶವಾದ ಪ್ರೀತಿ ಕೊಡಬಲ್ಲರು. ತಾಯಿ ಮತ್ತು ಗುರುವಿನ ಋಣದಿಂದ ಹೊರಬರಲು ಸಾಧ್ಯವಿಲ್ಲ. ಗುರುವಾದವರು. ನಿಷ್ಪಕ್ಷಪಾತವಾಗಿರಬೇಕು. ಧನಾತ್ಮಕ ಮನೋಭಾವ ಹೊಂದಿರಬೇಕು….

Read More

ವಿಜಯಪುರ ಕಾನಿಪ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ,11: ಜಿಲ್ಲೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಷ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಜು. 19ರಂದು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರನ್ನು ಆವ್ಹಾನಿಸಲು ಜಿಲ್ಲೆಯ ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರರ್ಣಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶನ ಸದಸ್ಯ ಕೆ.ಕೆ.ಕುಲಕರ್ಣಿ ಹಾಗೂ ಜಿಲ್ಲಾ ಖಜಾಂಚಿ ರಾಹುಲ್ ಆಪ್ಟೆ ಅವರು…

Read More