4 ನೇ ಎಸ್. ಎ. ಕೆ ಇಂಟರ್- ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 2:4ನೇ ಎಸ್. ಎ. ಕೆ ಇಂಟರ್ ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ ಆ.15 ರಿಂದ 16ರವರೆಗೆ ಬೆಂಗಳೂರಿನ ದಯಾನಂದ ಸಾಗರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಸ್ಕೈಸ್ ಸಂಸ್ಥೆ ಮತ್ತು ಭಾರತೀಯ ರಾಕೆಟ್ ಸ್ಪೈಸ್ ಸಂಸ್ಥೆ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಈ ಸ್ಪೈಸ್ ಕ್ರೀಡಾಕೂಟವು ಸಬ್- ಜೂನಿಯರ್, ಜ್ಯೂನಿಯರ್, ಬಾಲಕರು ಮತ್ತು ಬಾಲಕಿಯರ, ಮತ್ತು ಪುರುಷ ಹಾಗೂ ಮಹಿಳೆಯರ ಕ್ರೀಡಾಕೂಟ ನಡೆಯಲಿದೆ. ಭಾಗವಹಿಸುವವರು ಹೆಸರನ್ನು ನೋಂದಾಯಿಸಬಹುದು ಎಂದು ವಿಜಯಪುರ ಜಿಲ್ಲೆ ಸ್ಪೈಸ್ ಸಂಸ್ಥೆ, ಸಂಸ್ಥಾಪಕ…

Read More

ಆ.೭ರಂದು ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಆ.೧: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ವಿಜಯಪುರ, ಇವರ ಸಹಯೋಗದೊಂದಿಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಆ.೭ರಂದು ಉದ್ಯೊಗ ಮೇಳ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿ,…

Read More

ಬಸವನಬಾಗೇವಾಡಿಯಲ್ಲಿ ವ್ಯಸನ ಮುಕ್ತ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1: ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸಾಮೀಜಿ ಹೇಳಿದರು.ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಹಾಂತ ಶಿವಯೋಗಿಗಳ ಜಯಂತಿಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಾಗಲಕೋಟೆಯ ಜಮಖಂಡಿ…

Read More

ಡಿವಿಪಿ ಹೋರಾಟದ ಫಲಶೃತಿ : ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ,ಆ.1 : ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್ ನ ಹೋರಾಟದ ಫಲವಾಗಿ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಆರಂಭವಾಗಿದ್ದು ಸಂತೋಷದ ಸಂಗತಿಯಾಗಿದೆ ಎಂದು ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹರ್ಷ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾಲಯದ ಅವರಣದ ನೂತನವಾಗಿ ಆರಂಭವಾದ ಎಸ್‌ಸಿ, ಎಸ್‌ಟಿ ಮಹಿಳಾ ವಸತಿ ನಿಲಯಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮಹಿಳಾ ವಸತಿ ನಿಲಯಕ್ಕಾಗಿ…

Read More

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ: ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಗೆಣ್ಣೂರು ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ,ಆ.1:ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮ ನಡೆಯಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ‌ಮದ್ಯಪಾನ ಸಂಯಮ‌ ಮಂಡಳಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ,ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಆರಂಭಗೊಂಡಜನಜಾಗೃತಿ…

Read More

ಸಾಹಿತಿ ಮಧುರಚೆನ್ನರ 122ನೇ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನ ವತಿಯಿಂದ ಮಧುರಚೆನ್ನರ 122ನೇ ಜನ್ಮ ದಿನಾಚರಣೆಯನ್ನು ಗುರುವಾರ ಹಲಸಂಗಿ ಗ್ರಾಮದ ಶ್ರೀ ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಹಲಸಂಗಿಯ ಎಸ್.ಎ.ವಿ.ವಿ. ಸಂಘದ ಅಧ್ಯಕ್ಷ ಅರವಿಂದ ಮನಮಿ ಉದ್ಘಾಟಿಸಿದರು. ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ. ತಿಕೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಇಂಡಿ ವಿಭಾಗದ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಮಾತನಾಡಿ, ಸಂವಿಧಾನ ನಮಗೆಲ್ಲ ಸಮನಾದ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ರೈತ ಭಾರತ ಪಕ್ಷದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿಜಯಪುರ ಜಿಲ್ಲೆಯನ್ನು 371 ಜೆ ಗೆ ಸೇರಿಸಲು ಆಗ್ರಹಿಸಿದರು.ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹಿಂದುಳಿದ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸದೆ…

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More

ಅವಮಾನ ಎನ್ನದೆ ನಿರಂತರವಾಗಿ ಸಮಾಜಮುಖಿ ಕೆಲಸ ಮಾಡಿ: ಡಾ. ಪ್ರಾಣೇಶ ಜಹಾಗೀರದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 30:ಸಮಾಜ ಸೇವೆಯಲ್ಲಿ ತೊಡಗಿಕೊಂಡವರನ್ನು ಜನ ಮೊದಲು ಅನುಮಾನದಿಂದ ನೋಡುತ್ತಾರೆ. ಆನಂತರ ಅಸೊಯೆಯಿಂದ ಅವಮಾನಿಸುತ್ತಾರೆ, ಇವೆರಡನ್ನು ಮೆಟ್ಟಿ ಮೇಲೇರಿದಾಗ ಸನ್ಮಾನಿಸುತ್ತಾರೆ. ಈ ರೀತಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾಮಾಜಿಕ ಕಾರ್ಯ ಮಾಡಬೇಕೆಂದು ಅಂತರಾಷ್ಟಿಯ ರೋಟರಿ ಜಿಲ್ಲೆ 3170ರ ಮಾಜಿ ಜಿಲ್ಲಾ ಪ್ರಾಂತಪಾಲರಾದ ಡಾ.ಪ್ರಾಣೇಶ ಜಹಾಗೀರದಾರ ಅವರು ಹೇಳಿದರು.ರೋಟರಿ ಪ್ರೋಬಸ್ ಕ್ಲಬ್ ವಿಜಯಪುರ ಉತ್ತರದ ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ಕ್ಲಬ್ 25 ವರ್ಷ ಪೂರೈಸಿದ ನೆನಪಿಗಾಗಿ ಹೊರತಂದ ಬೆಳ್ಳಿಮಹೋತ್ಸವ…

Read More

ಮಾನವ ಜನ್ಮ ಸಾರ್ಥಕತೆಗೆ ಶರಣರ ತತ್ವ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…

Read More