ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More

ಅರ್ಜುಣಗಿಯಲ್ಲಿ ರೈತ ಆತ್ಮಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 22:ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಶಿವಾಜಿ ಘೋಲಫ (56) ನೇಣಿಗೆ ಶರಣಾದ ರೈತ.ಕೆಬಿಜಿ ಬ್ಯಾಂಕ್ ನಲ್ಲಿ 3 ಲಕ್ಷ ಸಾಲ,ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿಯೂ ಸಾಲ ಮಾಡಿದ್ದ. ಖಾಸಗಿಯವರ ಕಡೆಗೂ ರೈತ ಶಿವಾಜಿ ಸಾಲ ಮಾಡಿದ್ದ.ರೈತ ಶಿವಾಜಿ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 22:ಸಹಕಾರ ಭಾರತಿ ಕರ್ನಾಟಕ ನೂತನ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆಯಾಗಿದ್ದು, ಜು. ೨೫ ರಂದು ನಗರದ ಭಾವಸರ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.ಆಯ್ಕೆಗೊಂಡ ನೂತನ ಜಿಲ್ಲಾಧ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.ಈ ಸಮಾರಂಭವನ್ನು ಸಂಸದ ರಮೇಶ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು,…

Read More

ಶಾಸಕ ಕಾಶಪ್ಪನವರಿಗೆ ಅಂತ್ಯಕಾಲ ಬಂದಿದೆ- ಯತ್ನಾಳ ಕಿಡಿ

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ಶಾಸಕ ವಿಜಯಾನಂದ ಕಾಶಪ್ಪನವರಿಗೆ ಅಂತ್ಯ ಕಾಲ ಬಂದಿದೆ. ಆರುವ ಮುನ್ನ ದೀಪ ಉರಿಯುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ.ವಿಜಯಾನಂದ ಕಾಶಪ್ಪನವರ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿರುವ ವಿಚಾರವಾಗಿ ಸೋಮವಾರ ಸುದ್ದಿಗಾರರ ಜೊತೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ಕಾಶಪ್ಪನವರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು.ಇಡೀ ಸಮಾಜ ಕಾಶಪ್ಪನವರ ಬೆನ್ನಿಗಿಲ್ಲ. ಕಾಶಪ್ಪನವರ ಪೂಜ್ಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.ಕೂಡಲಸಂಗಮ ಸ್ವಾಮೀಜಿ ಸಮಾಜದ ಪರ ಹಾಗೂ 2ಎ ಮೀಸಲಾತಿಗಾಗಿ…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯ ವಾಹಿನಿಗೆ ಬನ್ನಿ: ದಾನೇಶ ಅವಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 20:ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ನ್ಯಾಯವಾದಿ ದಾನೇಶ ಅವಟಿ ಜನತೆಗೆ ಕರೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಆಶ್ರಮ ಹತ್ತಿರ. ಕಾಳಿಕಾ ನಗರದ ಶ್ರೀ ಮೌನೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ. 1953 ನೇ ಮದ್ಯವರ್ಜನ ಶಿಬಿರದ ಪ್ರಮುಖ ಉಪನ್ಯಾಸಕರಾಗಿ ಮಾತನಾಡಿದರು.ಸಪ್ತವ್ಯಸನಗಳಲ್ಲಿ ಒಂದಾದ ಮದ್ಯಪಾನವು ಮಾನವ ಕುಲಕ್ಕೆ ಅಂಟಿದ ಬಹುದೊಡ್ಡ ಮಹಾಶಾಪ. ಮದ್ಯಪಾನ ವ್ಯಸನಕ್ಕೀಡಾದ ವ್ಯಕ್ತಿಯ ಆರೋಗ್ಯ, ಕುಟುಂಬ, ಆರ್ಥಿಕ, ಸಾಮಾಜಿಕ…

Read More

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ‌ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು‌ ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…

Read More

ಮುಂಗಡ ಹಣ ಕೊಡದ್ದಕ್ಕೆ ಒಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ : ಇಬ್ಬರ ಸೆರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 19:ಕೆಲಸಕ್ಕೆ ಬರುವುದಾಗಿ ಮುಂಗಡ ಹಣ ಪಡೆದಿದ್ದನ್ನು ವಾಪಸ್ ಕೊಡದೇ ಇರುವುದಕ್ಕೆ ಹಣ ಪಡೆದ ವ್ಯಕ್ತಿಯನ್ನು ಇಬ್ಬರು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಚಡಚಣದ ಕುಮಾರ ಉರ್ಪ್ ಅರ್ಜುನ ಬಿರಾದಾರ, ಉಮರಾಣಿ ಗ್ರಾಮದ ಶ್ರೀಶೈಲ ಗಿರಿಯಪ್ಪ ಪೀರಗೊಂಡ ಅವರು ಬಂಧಿತ ಆರೋಪಿಗಳು.ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಬಾಶಾಸಾಬ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಡ್ರೈವಿಂಗ್ ಕೆಲಸಕ್ಕೆ ಬರುವುದಾಗಿ 20,000 ರೂ. ಮುಂಗಡವಾಗಿ ಪಡೆದುಕೊಂಡಿದ್ದರು. ಕೆಲಸಕ್ಕೂ…

Read More

ಕೈಮಗ್ಗ ನೇಕಾರರಿಗೆ ಸಾಲ-ಸೌಲಭ್ಯ : ಅರ್ಜಿ ಆಹ್ವಾನ

ಸಪ್ತ ಸಾಗರ, ವಾರ್ತೆ, ವಿಜಯಪುರ, ಜು.19: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್…

Read More

ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ,…

Read More