ವಿಶಾಲ ಗಾಂಧಿ ವೃತ್ತದಲ್ಲಿ ಪುಟ್ಟ ಗಾಂಧಿ..! ರಾಷ್ಟ್ರಪಿತನಿಗೆ ವಿಜಯಪುರದಲ್ಲಿ ಸಿಗಬೇಕಿದೆ ಭವ್ಯ ಗೌರವ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 9:ಐತಿಹಾಸಿಕ ಸ್ಮಾರಕಗಳ ನಗರ, ಪ್ರವಾಸೋದ್ಯಮದ ಪ್ರಮುಖ ತಾಣ, ಸ್ಮಾರಕಗಳ ವೈಭವಕ್ಕೆ ಹೆಸರಾದ ವಿಜಯಪುರ ನಗರದ ಹೃದಯಭಾಗದಲ್ಲಿರುವ ಗಾಂಧಿ ವೃತ್ತ ಇಂದು ಒಂದು ಪ್ರಶ್ನೆಯನ್ನು ಎತ್ತುತ್ತಿದೆ—ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರಿಗೆ ತಕ್ಕ ಗೌರವ ಇಲ್ಲಿ ಸಿಕ್ಕಿದೆಯೇ? ಗಾಂಧಿ ಪ್ರತಿಮೆಗೆ ಕಾಯಕಲ್ಪ ಯಾವಾಗ? ನಗರದ ಅತ್ಯಂತ ಪ್ರಮುಖ ವೃತ್ತಗಳಲ್ಲಿ ಒಂದಾದ ಗಾಂಧಿ ವೃತ್ತದಲ್ಲಿ ವಿಶಾಲವಾದ ಜಾಗವಿದೆ. ದಿನವಿಡೀ ಸಾವಿರಾರು ವಾಹನಗಳು, ಪಾದಚಾರಿಗಳು ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಆದರೆ, ಈ ವೃತ್ತದ ಮಧ್ಯಭಾಗದಲ್ಲಿರುವ ಗಾಂಧೀಜಿಯವರ ಪ್ರತಿಮೆ…

Read More

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ–ಬೈಕ್ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ನಗರದ ಹೊರವಲಯದ ಸೊಲ್ಲಾಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿ-50 (ಎನ್‌ಎಚ್-50)ರಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪಾದಚಾರಿ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ವಿಜಯಪುರ ಮೂಲದ ಭೂಷಣ್ ನಾಯಕ (24) ಹಾಗೂ ಗಗನ್ ಪರಮೇಶ (19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಬಿಲಾಲ್ ಜಾತಗಾರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಇಬ್ಬರೂ ಯುವಕರು…

Read More

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ನಗರದ ಚಪ್ಪರಬಂದ್ ಗಲ್ಲಿಯಲ್ಲಿ 36 ವರ್ಷದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.ಮೃತನನ್ನು ಉಮರಸಾಬ್ ಪಟೇಲ್ (36) ಎಂದು ಗುರುತಿಸಲಾಗಿದೆ. ಆರೋಪಿಗಳು ಕಬ್ಬಿಣದ ರಾಡ್ ಹಾಗೂ ಸ್ಕ್ರೂ (ಚೂಪಾದ ಕಬ್ಬಿಣದ ವಸ್ತು) ಬಳಸಿ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.ಉಮರಸಾಬ್ ಶನಿವಾರ ರಾತ್ರಿ ತನ್ನ ಕೆಲ ಗೆಳೆಯರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಇದೇ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಜಗಳಕ್ಕೆ…

Read More

ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಆರ್ಟ್ ಆಫ್ ಲಿವಿಂಗ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತ ಆಶ್ರಯದಲ್ಲಿ ವಿಶೇಷ ಯೋಗ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಕಳೆದ ಏಳು ದಿನಗಳಿಂದ ಕಾರಾಗೃಹ ಸಿಬ್ಬಂದಿ ಹಾಗೂ ಕೈದಿಗಳಿಗಾಗಿ ಡಾ. ಬಿ.ಎಂ. ಪಾಟೀಲ್ ಗುರೂಜಿಯವರ ನೇತೃತ್ವದಲ್ಲಿ ಸಂತಸದ ಕಾರ್ಯಕ್ರಮ ಮತ್ತು ಸುದರ್ಶನ ಕ್ರಿಯೆ ಶಿಬಿರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಾಗೃಹ ಅಧೀಕ್ಷಕ ಡಾ. ಎಂ.ಎಸ್. ಮಾಳಿ, ಆರೋಗ್ಯಕರ ಜೀವನಕ್ಕೆ ಮನಸ್ಸಿನ ಶಾಂತಿ ಅತ್ಯಗತ್ಯವಾಗಿದೆ. ಮನಸ್ಸು…

Read More

ಉದ್ಯೋಗ ಮೇಳದಲ್ಲಿ ಬಿಎಲ್ಡಿಇ ಕಾಲೇಜಿನ 23 ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 21:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಜೂನ್ 9ರಂದು ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಬೆಳಗಾವಿಯ ಏಕಸ್ ಸಂಸ್ಥೆಗಳು ನಡೆಸಿದ ಕ್ಯಾಂಪಸ್ ಉದ್ಯೋಗ ಮೇಳದಲ್ಲಿ ಕಾಲೇಜಿನ ಒಟ್ಟು 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಗೆ 17 ಮತ್ತು ಏಕಸ್ ಸಂಸ್ಥೆಗೆ ಆರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ವತಿಯಿಂದ ಸಹಾಯಕ ವ್ಯವಸ್ಥಾಪಕ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಂಶಿತ್ ಸಿ. ಡಿ. ಅವರು ಖುದ್ದಾಗಿ ಆಗಮಿಸಿ…

Read More

ವಿಜಯಪುರದಲ್ಲಿ ಆಟೋ ಚಾಲಕನ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 20:ನಗರದ ಬಂಜಾರ ಕ್ರಾಸ್ ಸಮೀಪ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಹತ್ಯೆಯಾದ ವ್ಯಕ್ತಿಯನ್ನು ಖಾಜಾ ಅಮೀನ್ ದರ್ಗಾ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ ವಿಲಾಸ ನಡುವಿನಮನಿ (30) ಎಂದು ಗುರುತಿಸಲಾಗಿದೆ. ಕುಟುಂಬದ ನಿರ್ವಹಣೆಗಾಗಿ ಆಟೋ ಚಾಲನೆ ಮಾಡುತ್ತಿದ್ದ ವಿಲಾಸ ಅವರು ಬಂಜಾರ ಕ್ರಾಸ್ ಪ್ರದೇಶದಲ್ಲಿ ಇದ್ದ ವೇಳೆ ದುಷ್ಕರ್ಮಿಗಳ ದಾಳಿಗೆ ಗುರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವಿಲಾಸ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ…

Read More

ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲಾ ಓಬಿಸಿ ಮೋರ್ಚಾ ವತಿಯಿಂದ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ಎಂ. ನಾಗರಾಜ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ ಅವರನ್ನು ಅಭಿನಂದಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಪ್ರಾಧ್ಯಾಪಕರಾಗಿ ಹಾಗೂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಪ್ರೊ….

Read More

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ ತರಬೇತಿಗೆ ವಿಜಯಪುರ ರೈತರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದೆ.ನಿನ್ನೆ ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್‌ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ…

Read More

ತಾಯಿ ಹಾಲು ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಿ: ಡಾ. ಮಾಸ್ತಿಹೊಳಿ ಧಾತ್ರಿ ಸಮಗ್ರ ಹಾಲುಣಿಸುವಿಕೆಯ ಮಹತ್ವದ ಕಾರ್ಯಾಗಾರ‌ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ಅವಧಿಗೂ ಮುನ್ನ ಶಿಶು ಜನನದಿಂದ‌ ಅಮೃತಕ್ಕೆ ಸಮಾನವಾದ ಎದೆಹಾಲು ಲಭ್ಯವಾಗದಿದ್ದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಹಾಲಿನ‌ ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಸಮಗ್ರ ಹಾಲುಣಿಸುವಿಕೆಯ ನಿರ್ವಹಣೆ ಕೇಂದ್ರ ಮತ್ತು ತಾಯಂದಿರ ಹಾಲಿನ ಬ್ಯಾಂಕ್ ಹಾಗೂ ಸುಶೇನಾ ಹೆಲ್ತ್ ಫೌಂಡೇಶನ್ ಹೈದ್ರಾಬಾದ ಇವರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ…

Read More

ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ ಅತೀ ಹೆಚ್ಚು ಅವಧಿಗೆ (4399 ದಿನಗಳು) ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹೆಗ್ಗಳಿಕೆಗೆ ಪಾತ್ರರಾದ ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರದ ವತಿಯಿಂದ ಬುಧವಾರ ವಾರ್ಡ್ ನಂ. 03 ಭಾವಸಾರ ನಗರದ ವರದಹಸ್ತ ಆಂಜನೇಯ ದೇವಸ್ಥಾನದಲ್ಲಿ ಮತ್ತು ಸರ್ಕಾರಿ ಶಾಲೆ ನಂ 32ರಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮ ಮಾಡಲಾಯಿತು.ಬಿಜೆಪಿ ವಿಜಯಪುರ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ…

Read More