ಅ. 4ರಂದು ಹಜರತ್ ಅರ್ಕಾಟ್ ದರ್ಗಾದ ಉರುಸು

ಸಪ್ತ ಸಾಗರ ವಾರ್ತೆ, ವಿಜಯಪುರ, ಅ. 2 ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರ ಅಂಗವಾಗಿ ಅ.4 ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ. ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ…

Read More

ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯರ, ಮಹಾತ್ಮಾ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿರವರ ಜಯಂತಿಯನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಆವರು ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ, ಎದುರಾದ ಸವಾಲುಗಳು, ಅವರ ವ್ಯಕ್ತಿತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ನಮಗೆ ಕಲಿಸಿಕೊಟ್ಟ ಪಾಠಗಳು ಹಲವು. ಸತ್ಯ,…

Read More

ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಕವಿಗೋಷ್ಠಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. ಅ. 1: ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ, ನಾಡಿನ ಕವಿಗಳಿಂದ ನಮಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಎಂಬ ವಿಷಯದ ಕುರಿತು(ಅಕ್ಟೋಬರ್-5)ರಂದು ಮುಂಜಾನೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಅಥವಾ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ವಿಷಯದ ಕುರಿತು ಕವನ ವಾಚಿಸಬಹುದು.ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ, ವಿಜಯಪುರ ಪರವಾಗಿ ಹೆಸರು ನೋಂದಾಯಿಸಿಕೊಳ್ಳಲು ಮೊ. 72042 79187 ,96320…

Read More

ವಿಜಯಪುರದಲ್ಲಿ ಪ್ರಪ್ರಥಮ ಬಾರಿಗೆ ರಾವಣ ದಹನ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29: ಇಸ್ಕಾನ್ ವಿಜಯಪುರ ತಂಡದಿಂದ ಅಕ್ಟೊಬರ್ 1 ರಂದು ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಭಾಭವನದಲ್ಲಿ ಸಾಯಂಕಾಲ 5:30ಕ್ಕೆ ದಸರಾ ಉತ್ಸವ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮವನ್ನು ಇಸ್ಕಾನ್ ಹುಬ್ಬಳ್ಳಿ ಧಾರವಾಡ ಇವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ.ಶ್ರೀ ರಾಮ ದೇವರ ಅಭಿಷೇಕ, ಭಕ್ತರಿಂದ ಹರಿನಾಮ ಸಂಕೀರ್ತನೆ, ಪಲ್ಲಕಿ ಉತ್ಸವ, ಭರತನಾಟ್ಯ, ಮಕ್ಕಳಿಂದ ವಿವಿಧ ವೇಷಭೂಷಣ ಸ್ಪರ್ಧೆ ನಂತರದಲ್ಲಿ ಪ್ರಪ್ರಥಮವಾಗಿ ವಿಜಯಪುರದಲ್ಲಿ 35 ಅಡಿ ರಾವಣ ದಹನ ಕಾರ್ಯಕ್ರಮ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಮೊ.9036329108 / 9743231256 ಸಂಪರ್ಕಿಸಬಹುದು…

Read More

ಸೆ. 26 ರಂದು ವಿಜಯಪುರ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 25: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕಿಯರ ಸಂಘ (ರಿ), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಸೆ. 26ರಂದು ವಿಜಯಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

Read More

ಆರೋಗ್ಯಯುತ ಜೀವನಕ್ಕೆ ದೈಹಿಕ-ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯವಶ್ಯಕ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.25:ಒತ್ತಡದ ಜೀವನದ ಮಧ್ಯೆ ಆರೋಗ್ಯಯುತ ಬದುಕಿಗೆ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಮ್ಮ ದೈನಂದಿನದ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಗುರುವಾರ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಾನಸಿಕ…

Read More

ವಿಜಯಪುರದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಜಯಪುರ ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಥಣಿ ರಸ್ತೆ ತಡೆ ನಡೆಸಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.ಕಾಂಗ್ರೆಸ್ ಸರ್ಕಾರ – ಜೀವಕ್ಕೆ ಸಂಚಾರ’, ಗುಂಡಿ ಮುಚ್ಚದೇ ರಾಜ್ಯದ ಜನತೆ…

Read More

ಸೆ. 26ರಂದು ಐಫೋನ್ ಕಂಪನಿ ಫಾಕ್ಸ್ ಕಾನ್ ಸಿಬ್ಬಂದಿ ನೇಮಕಕ್ಕೆ ವಿಜಯಪುರಕ್ಕೆ ಆಗಮನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಶ್ವಾದ್ಯಂತ ಮೊಬೈಲ್ ಪ್ರೀಯರು ಹೊಸ ಮಾದರಿ ಐಫೋನ್ ಖರೀದಿಗೆ ನಾನಾ ಮಹಾನಗರಗಳಲ್ಲಿ ಸಾಲಿನಲ್ಲಿ ನಿಲುತ್ತಿದ್ದಾರೆ. ಇಂಥ ಐಫೋನ್ ತಯಾರಿಸುವ ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ತನ್ನ ಕಂಪನಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಬಸವನಾಡು ವಿಜಯಪುರಕ್ಕೆ ಆಗಮಿಸುತ್ತಿರುವುದು ಗಮನ ಸೆಳೆದಿದೆ.ಈ ಕಂಪನಿ ಬಿ.ಎಲ್.ಡಿ.ಇ ಸಂಸ್ಥೆ ಸಹಯೋಗದಲ್ಲಿ ನಗರದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 26 ರಂದು ಶುಕ್ರವಾರ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ…

Read More

ಸಾಹಿತಿ ಭೈರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವು ಗೌರವ, ಪುರಸ್ಕಾರಗಳಿಗೆ ಭಾಜನರಾಗಿದ್ದ ಖ್ಯಾತ ಕಾದಂಬರಿಕಾರ, ನಾಡೋಜ ಎಸ್‌.ಎಲ್‌. ಭೈರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ ಮಿಡಿದಿದ್ದಾರೆ.ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹನೀಯರಲ್ಲಿ ಒಬ್ಬರಾದ ಎಸ್‌. ಎಲ್‌. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ಹಾನಿ ಉಂಟಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್‌ ಗೌರವ ತಂದು ಕೊಟ್ಟ ಹೆಗ್ಗಳಿಕೆ ಅವರದ್ದು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಭೈರಪ್ಪನವರ…

Read More

ವಿಜಯಪುರ ಐತಿಹಾಸಿಕ ಸ್ಮಾರಕ ತಾಜಬಾವಡಿಗೆ ಜಿಲ್ಲಾಧಿಕಾರಿ ಡಾ. ಆನಂದ‌ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.23:ನಗರದಲ್ಲಿ ಇರುವ ಐತಿಹಾಸಿಕ ಬಾವಿಯಾದ ತಾಜಬಾವಡಿ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.ಅಡಾಪ್ಟ ಎ ಮೊನೊಮೆಂಟ್ ಯೋಜನೆಯಡಿ ತಾಜಬಾವಡಿ ಸ್ಮಾರಕವನ್ನು World Monument Fund India Associations Mumbai ಸಂಸ್ಥೆ ಅವರು ದತ್ತು ಪಡೆದಿದ್ದು, ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ ಪ್ರವಾಸಿ ಸೌಕರ್ಯಗಳನ್ನು ಒದಗಿಸಿ ದೇಶಿ-ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆ ರೂಪಿಸಿ ಹಮ್ಮಿಕೊಂಡಿರುತ್ತಾರೆ.ತಾಜಬಾವಡಿ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು…

Read More