ಶಿಕ್ಷಕರು ಬಡವರಾಗಿದ್ದರೂ ಹೃದಯ ಶ್ರೀಮಂತರು: ಸೋಮನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6:ಶಿಕ್ಷಕರು ಆರ್ಥಿಕವಾಗಿ ಬಡವರಾದ್ದರೂ, ಹೃದಯದಿಂದ ಶ್ರೀಮಂತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವ (ಆಡಳಿತ) ಶಂಕರಗೌಡ ಸೋಮನಾಳ ಹೇಳಿದರು.ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ,ನಿರಂತರ ಅಧ್ಯಯನ, ಪ್ರಾಮಾಣಿಕ, ಸೃಜನಶೀಲತೆ ಮತ್ತು ಅತ್ಯುತ್ತಮ ಮೌಲ್ಯಗಳು, ಸಮರ್ಪಿತ ಗುಣಗಳು ಶಿಕ್ಷಕರು ಹೊಂದಿರಬೇಕು. ಶಿಕ್ಷಕರು ಆರ್ಥಿಕವಾಗಿ ಬಡವರಾಗಿದ್ದರೂ ಹೃದಯದಿಂದ ಶ್ರೀಮಂತರಾಗಿದ್ದಾರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಕರ ಸ್ವರೂಪವನ್ನು…

Read More

ಶಿಕ್ಷಕರ ದಿನಾಚರಣೆ-ಚಿಂತನಗೋಷ್ಠಿಶಿಕ್ಷಕ ಮನುಷ್ಯನ ಸೃಷ್ಟಿಕರ್ತ-ಬಸವರಾಜ ಹಂಚಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಶಿಕ್ಷಕ ಮನುಷ್ಯನ ಸೃಷ್ಟಿಕರ್ತ. ಅವನು ಮಾನವಕುಲ, ವರ್ತಮಾನ ಮತ್ತು ಭವಿಷ್ಯದ ಸಂಪೂರ್ಣ ನಾಗರಿಕತೆಯ ಅಡಿಪಾಯ. ಶಿಕ್ಷಕರ ಸಕ್ರಿಯ ಸಹಕಾರದಿಂದ ರಾಷ್ಟ್ರದ ಪುನರ್ನಿರ್ಮಾಣ ಸಾಧ್ಯ ಎಂದು ಮಡಿಕೇಶ್ವರದ ಸರಕಾರಿ ಪ್ರೌಢ ಶಾಲೆಯ ಇಂಗ್ಲೀಷ್ ಶಿಕ್ಷಕ ಬಸವರಾಜ ಹಂಚಲಿ ಹೇಳಿದರು.ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ “ಶಿಕ್ಷಕರು ರಾಷ್ಟ್ರ ನಿರ್ಮಾಪಕರು”-ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ನೈತಿಕ ಮೌಲ್ಯ, ಮತ್ತು…

Read More

ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರ ತರಬೇಕು: ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಡಿದರು. ದಿನಕ್ಕೊಂದು ಆವಿಷ್ಕಾರಗಳ ಮೂಲಕ ಶರವೇಗದಲ್ಲಿ ಸಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಪಾಲಕರು ಹಾಗೂ…

Read More

ಬಸವರಾಜ ಬಾಗೇವಾಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 6 ಮಹಾಕವಿ ರನ್ನ ಫೌಂಡೇನ್ ಹಾಗೂ ವೀರ ರಾಣಿ ಕಿತ್ತೂರ ಚನ್ನಮ್ಮ ಸೌಂಸ್ಕೃತಿಕ ಕಲಾ ಸಂಘ ಮುದೋಳ ಇವರ ಸಯೋಗದಲ್ಲಿ ಸೆ. 28 ರಂದು ಕನ್ನಡ ಸಾಹಿತ್ಯ ಭವನ ಮುಧೋಳದಲ್ಲಿ ಪ್ರಥಮ ಸಮ್ಮೇಳನ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಗಮನಿಸಿ ಈ ವರ್ಷ ಕೊಡುಮಾಡುವ ಕ್ರೀಡಾ ಭೀಷ್ಮ ಭೂಷಣ ರಾಜ್ಯ ಪ್ರಶಸ್ತಿಗೆ ವಿಜಯಪುರ…

Read More

ರಮಾಬಾಯಿ ಪ್ರೌಢಶಾಲೆಯಲ್ಲಿ ಶಿಕ್ಷಕ ದಿನಾಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ, ಸಿದ್ದಾರ್ಥ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಮತ್ತು ಡಿಗ್ರಿ ಕಾಲೇಜಿನಲ್ಲಿ ಶುಕ್ರವಾರ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಜ್ಯೋತಿಬಾಪುಲೆ ಶಿಕ್ಷಕ ದಿನವನ್ನು ಆಚರಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ತುಕಾರಾಂ ಚಂಚಲಕರ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಚಂಚಲಕರ ಅವರು ಮಾತನಾಡಿ, ಆಗಿನ ಕಾಲಘಟ್ಟದಲ್ಲಿ ಶಿಕ್ಷಣದ ಕೊರತೆ ಇದ್ದುದರಿಂದ ಬಹಳ ಪ್ರಯತ್ನಪಟ್ಟು ಮಾತೆ ಸಾವಿತ್ರಿಬಾಯಿ…

Read More

ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5:ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ…

Read More

ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಶಿಕ್ಷಕ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಯಿತು.ಶುಕ್ರವಾರ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿವಿಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಶಿಕ್ಷಕರು ಸಮಾಜದ ನಿಜವಾದ ದಾರಿದೀಪ. ಅವರ ಮಾರ್ಗದರ್ಶನವಿಲ್ಲದೆ ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವುದು ಅಸಾಧ್ಯ. ಶಿಕ್ಷಕರು ಕೇವಲ ಪಾಠ ಕಲಿಸುವವರಲ್ಲ. ಅವರು ಮೌಲ್ಯಗಳನ್ನು ಬೆಳೆಸುತ್ತ ವಿದ್ಯಾರ್ಥಿಗಳ ಜೀವನವನ್ನು ರೂಪಿಸುತ್ತಾರೆ. ಬಿ.ಎಲ್.ಡಿ.ಇ ವಿವಿ ಶ್ರೇಷ್ಠ ಶಿಕ್ಷಣ, ಗುಣಮಟ್ಟದ…

Read More

ಸೆ. 8ರಿಂದ 13ರ ವರೆಗೆ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 13ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು(ಸಿಯಾಟಿಕಾ) ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7019656245 ಮತ್ತು‌ 8147740460ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More

ಪೌರಕಾರ್ಮಿಕರಿಗೆಉಚಿತಮಧುಮೇಹಚಿಕಿತ್ಸೆ: ಡಾ. ಬಾಬುರಾಜೇಂದ್ರನಾಯಕಘೋಷಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 3 : ಜಿಲ್ಲೆಯ ಮನಗೂಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರವು ಯಶಸ್ವಿಯಾಗಿ ನೆರವೇರಿತು.ಈ ಶಿಬಿರವನ್ನು ಶ್ರೀ ತುಳಸಿಗಿರೀಶ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ, ಖ್ಯಾತ ಮಧುಮೇಹ ತಜ್ಞ ಡಾ. ಬಾಬುರಾಜೇಂದ್ರ ನಾಯಿಕ ಹಾಗೂ ಭೀಮವಾದ ದಲಿತ ಸಂಘರ್ಷ ಸಮಿತಿಯ ತಾಲೂಕಾಧ್ಯಕ್ಷ ಮಹೇಶ ಪಿರಗಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಡಿಎಸ್ ಧುರೀಣ ಸೋಮನಗೌಡ ಪಾಟೀಲ ವಹಿಸಿಕೊಂಡಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವನಾಥಗೌಡ ಪಾಟೀಲ ನೆರವೇರಿಸಿದವರು. ಡಾ. ಬಾಬುರಾಜೇಂದ್ರ…

Read More