ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಸಪ್ತಸಾಗರ ವಾರ್ತೆ ಬೆಂಗಳೂರು, ಡಿ. 25: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ…

Read More

ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25: ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ಅವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ…

Read More

ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16:ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಕಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೀಡಾಗಿದ್ದರು.ಯಾರೋ ಕಿಡಿಗೇಡಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲ್ ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೇಲ್ ಕಳಿಸಿದ್ದರು.ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರಿಗೆ ತಕ್ಷಣ ಸುದ್ದಿ ಮುಟ್ಟಿಸಲಾಯಿತು. ವಿಳಂಬ ಮಾಡದೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನೋಡು ನೋಡುತ್ತಿದ್ದಂತೆಯೇ ಬಾಂಬ್ ನಿಗ್ರಹದಳ ಶ್ವಾನದಳದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ…

Read More

ಶಾಸಕ ಯತ್ನಾಳ ಜನ್ಮದಿನ: ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 15:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಜನ್ಮ ದಿನದ ಅಂಗವಾಗಿ ಶನಿವಾರ ನಗರದ ಆರಾಧ್ಯದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಂಜನಿಯರಿಂಗ್ ವಿದ್ಯಾರ್ಥಿಗೆ ರೂ. 50,000 ಆರ್ಥಿಕ ನೆರವು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಯತ್ನಾಳ ಹುಟ್ಟು ಹಬ್ಬ ಆಚರಿಸಲಾಯಿತು. ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ತಂದೆ ಇಲ್ಲದ ಬಡ ಯುವಕ ಗಿರೀಶ್ ಗೌಡರ ಎಂಬಾತನ ಕಾಲೇಜು…

Read More

ಡಿ. 19ರಂದು ಬಿಎಲ್ ಡಿಇ ಡೀಮ್ಡ್ ವಿವಿ ಘಟಿಕೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ…

Read More

ಅನುಪ್ರಿಯಾ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರಡಿ. 14: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ…

Read More

ಚನ್ನಬಸವ ಶ್ರೀಗಳಿಂದ ಇಂಗಳೇಶ್ವರದಲ್ಲಿ ವಚನ ಗುಮ್ಮಟ ನಿರ್ಮಾಣ

ಸಪ್ತಸಾಗರ ವಾರ್ತೆ ಇಂಗಳೇಶ್ವರ, ಡಿ. 12 : ರಾಗ, ಧ್ವೇಷಗಳಿಲ್ಲದ ಮಂದಹಾಸದ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಶ್ರೀಗಳು ಆದಿಲ್ ಶಾಹಿ ಗೋಲಗುಂಬಜ ಕಟ್ಟಿದ ಮಾದರಿಯಲ್ಲಿ ವಚನ ಶಿಲಾ ಮಂಟಪ ನಿರ್ಮಿಸಿ ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದರು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ಶುಕ್ರವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಬಸವೈಕ್ಯರಾದ ಚನ್ನಬಸವ ಶ್ರೀಗಳ ಭಕ್ತಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More

ವಿಜಯಪುರ-ಬೆಂಗಳೂರ ಕಲ್ಯಾಣ ರಥ ಸಾರಿಗೆಯ ಪ್ರಯಾಣ ದರದಲ್ಲಿ ರಿಯಾಯಿತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11: ಪ್ರಯಾಣಿಕರ ಬೇಡಿಕೆಯಂತೆ, ವಿಜಯಪುರ-ಬೆಂಗಳೂರ ಮಾರ್ಗದ ಕಲ್ಯಾಣ ರಥ ವೊಲ್ಲೋ ಮಲ್ಟಿ ಎಕ್ಸಲ್ ಎಸಿ ಸ್ಲಿಪರ್ ಬಸ್ ಪ್ರಯಾಣ ದರದಲ್ಲಿ ರೂ.100 ಅಂದರೆ, ಶೇ 6% ರಷ್ಟು ರಿಯಾಯಿತಿ ನೀಡಲಾಗಿದೆ.ವಿಜಯಪುರ-ಬೆಂಗಳೂರ ಕಲ್ಯಾಣ ರಥ ಬಸ್ಸಿನ ದರ ರೂ. 1,399 ನಿಗದಿಪಡಿಸಲಾಗಿದ್ದು, ಪ್ರಯಾಣಿಕರು ಈ ರಿಯಾಯತಿ ದರದ ಉಪಯೋಗ ಪಡೆದುಕೊಳ್ಳುವಂತೆಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಬೆಳೆ ಪರಿಹಾರ ತಾರತಮ್ಯ ಖಂಡಿಸಿ ರೈತರಿಂದ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9 : ಬೆಳೆ ಹಾನಿ ಪ್ರಮಾಣ ಹೆಚ್ಚಾಗಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ, ಅಸಮರ್ಪಕ ಹಾಗೂ ಅನ್ಯಾಯಯುತವಾದ ಕ್ರಮಗಳನ್ನು ಅನುಸರಿಸಿರುವುದನ್ನು ಹಾಗೂ ಇನ್ನೂ ಕೆಲ ರೈತರಿಗೆ ಪರಿಹಾರ ಹಣವನ್ನು ಜಮಾ ಮಾಡದೇ ಇರುವುದನ್ನು ಖಂಡಿಸಿ ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರೈತರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರ ಪರಿಣಾಮ ಸರ್ಕಾರ ರೈತರಿಗೆ ಬೆಳೆ ಪರಿಹಾರ…

Read More