ಗ್ರಾಮಗಳ ಅಭಿವೃದ್ಧಿಗಾಗಿ ಹೆಮ್ಮೆಯಿಂದ ಕೆಲಸ ನಿರ್ವಹಿಸಿ: ಕಲ್ಲಪ್ಪ ನಂದರಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 21:ಗ್ರಾಮಗಳ ಅಭಿವೃದ್ಧಿಗಾಗಿ ಹೆಮ್ಮೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಹೇಳಿದರು.ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮ ಪಂಚಾಯತಿ ಅಡಿ ಹಮ್ಮಿಕೊಂಡ ರೋಜಗಾರ ದಿವಸ ಕಾರ್ಯಕ್ರಮದಲ್ಲಿ ಕೂಲಿಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಉದ್ಯೋಗವನ್ನು ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸುವುದು. ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಬಡಜನರ ಜೀವನೋಪಾಯದ ಮಟ್ಟ ಸುಧಾರಿಸುವುದು, ರಾಷ್ಟ್ರೀಯ ಗ್ರಾಮೀಣ…


