
ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಿಗಜಿಣಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5:ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ…