ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ: ಡಿಕೆಶಿ ವಿಸ್ತರಣೆ ಶೀಘ್ರದಲ್ಲೇ; ರಿಜಿಜು ಕಾಂಗ್ರೆಸ್‌ ಚಿಂತೆ ಬಿಟ್ಟು ತಮ್ಮ ಸರ್ಕಾರ ನೋಡಲಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 8:ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಶೀಘ್ರದಲ್ಲೇ ಇತ್ಯರ್ಥವಾಗಲಿದ್ದು, ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದರು.ವಿಧಾನಸೌಧ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ಮಹಿಳೆಯರಿಗೆ ಹೆಚ್ಚಿನ ಶಕ್ತಿ ನೀಡುತ್ತೇವೆ” ಎಂದರು.ಮಹಿಳಾ ಮೀಸಲಾತಿ ವಿಚಾರವಾಗಿ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಕೇಂದ್ರ…

Read More

ಮಹಿಳೆಯರಿಗೆ ಶೂನ್ಯ ಸ್ಥಾನ, ವಿಜಯಪುರಕ್ಕೂ ನಿರಾಸೆ: ಸಚಿವ ಸಂಪುಟ ವಿಸ್ತರಣೆ ವಿರುದ್ಧ ಆಪ್ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು, ಭ್ರಷ್ಟಾಚಾರದ ಆರೋಪ ಎದುರಿಸಿದ್ದ ನಾಯಕರಿಗೆ ಮತ್ತೆ ಅವಕಾಶ ಕಲ್ಪಿಸಿರುವುದು ಹಾಗೂ ವಿಜಯಪುರ ಜಿಲ್ಲೆಗೆ ಹೆಚ್ಚುವರಿ ಪ್ರಾತಿನಿಧ್ಯ ನೀಡದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ವೇದಿಕೆಗಳಲ್ಲಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ…

Read More