ವಿಶ್ವ ಪರಿಸರ ದಿನಾಚರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 6:ನಗರದ ಚಿದಂಬರೇಶ್ವರ ದೇವಸ್ಥಾನ ಹತ್ತಿರ ವಿಶ್ವ ಪರಿಸರ ದಿನ ಅಂಗವಾಗಿ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯ ಸಂದೇಶ ಸಾರಲಾಯಿತು.ಚಿದಂಬರ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ ಮಾತನಾಡಿ, ಪರಿಸರ ರಕ್ಷಿತ: ರಕ್ಷತ: ಎನ್ನುವಂತೆ ಪರಿಸರವನ್ನು ನಾವು ರಕ್ಷಿಸಿದರೆ, ಅದು ನಮ್ಮನ್ನು ರಕ್ಷಿಸುತ್ತದೆ. ಪರಿಸರ ನಮಗೆ ಪ್ರಾಣವಾಯು, ಆಹಾರ ಎಲ್ಲವೂ ನೀಡಿದೆ, ಆದರೆ ನಾವು ಪ್ರತಿಯಾಗಿ ಪರಿಸರವನ್ನು ವಿನಾಶ ಮಾಡುತ್ತಿದ್ದೇವೆ. ಮಾಲಿನ್ಯಗೊಳಿಸುತ್ತಿದ್ದೇವೆ. ಹೀಗಾಗಿ ಪರಿಸರ ರಕ್ಷಣೆ ನಮ್ಮ ಜೀವನದ ಭಾಗವಾಗಬೇಕು ಎಂದರು.ಯುವ ಧುರೀಣ ಪ್ರಕಾಶ…


