ವಿಜಯಪುರದಲ್ಲಿ ಮೊಳಗಿದ ದೇಶಭಕ್ತಿಯ ಘೋಷಣೆ: 300 ಮೀಟರ್ ತಿರಂಗಾ ಯಾತ್ರೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ವಿಜಯಪುರ ನಗರದಲ್ಲಿ ಗುರುವಾರ ದೇಶಭಕ್ತಿಯ ಸಂಭ್ರಮ ಮನೆಮಾಡಿತು. 300 ಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜ ಹಿಡಿದು ನೂರಾರು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಯುವಕರು ಹಾಗೂ ಸಾರ್ವಜನಿಕರು ನಗರದ ಪ್ರಮುಖ ಬೀದಿಗಳಲ್ಲಿ ಹೆಜ್ಜೆ ಹಾಕಿದರು. ಯಾತ್ರೆಯುದ್ದಕ್ಕೂ ‘ಭಾರತ ಮಾತಾ ಕಿ ಜೈ’, ‘ವಂದೇ ಮಾತರಂ’ ಘೋಷಣೆಗಳು ಮೊಳಗಿದವು.ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದ ಮುಂಭಾಗದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್….


