ರಾಜ್ಯದಲ್ಲಿ ಹೋರಾಟಕ್ಕೆ ಇನ್ನೊಂದು ಹೆಸರು ಯಡಿಯೂರಪ್ಪ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 6:ರಾಜ್ಯದಲ್ಲಿ ಹೋರಾಟಕ್ಕೆ ಇನ್ನೊಂದು ಹೆಸರು ಯಡಿಯೂರಪ್ಪ ಎಂದು ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರು ಮಾತನಾಡಿದರು.ಇಲ್ಲಿನ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿದಂಥ ಹುಟ್ಟು ಹೋರಾಟಗಾರ ಬಿ.ಎಸ್.ಯಡಿಯೂರಪ್ಪನವರ 50 ವರ್ಷದ ತಪಸ್ಸು ಹಾಗೂ ಪರಿಶ್ರಮಕ್ಕಾಗಿ ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಅಭಿನಂದನಾ ಸಮಾರಂಭ ಶ್ಲಾಘನೀಯ. ಅವರು ನಮ್ಮಂಥ ನೂರಾರು ಕಾರ್ಯಕರ್ತರನ್ನು ಬೆಳೆಸಿದ್ದು. ಬಿಜೆಪಿ ಒಂದು ರಾಜಕೀಯ ಶಕ್ತಿಯಾಗಿ ಬೆಳೆಯಲು ಅವರು ಕಾರಣೀಭೂತರೆಂದು ಅವರು ಬಣ್ಣಿಸಿದರು.ಅಖಂಡ…


