ಹೆರಿಟೇಜ್ ರನ್ : ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ- ಎಸ್ಪಿ ಲಕ್ಷ್ಮಣ ನಿಂಬರಗಿ ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ಡಿಸೆಂಬರ್ 7 ರಂದು ರವಿವಾರ ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ವೃಕ್ಷಥಾನ್ ಹೇರಿಟೆಜ್ ರನ್ ಕೋರ್ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹೆರಿಟೇಜ್ ರನ್ ನಡೆಯುವ ಎರಡು ದಿನಗಳ…


