ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನಿಖರ ದತ್ತಾಂಶ ಸಲ್ಲಿಕೆಗೆ ಸಿಇಒ ರಿಷಿ ಆನಂದ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾನವ ಅಭಿವೃದ್ಧಿ ಸೂಚ್ಯಂಕಗಳು (HDI) ಪ್ರಮುಖ ಮಾನದಂಡಗಳಾಗಿದ್ದು, ಅಭಿವೃದ್ಧಿಯಲ್ಲಿ ಹಿಂದುಳಿದ ತಾಲೂಕುಗಳ ಕುರಿತು ಸಂಗ್ರಹಿಸಲಾಗುವ ದತ್ತಾಂಶ ನಿಖರ ಹಾಗೂ ವಿಶ್ವಾಸಾರ್ಹವಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ–2031 ವರದಿಗಳ ತಯಾರಿಕೆಗೆ ಸಂಬಂಧಿಸಿದ ದತ್ತಾಂಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…


