ತಿಂಥಣಿ ಜಾತ್ರೆ: ವಿಶೇಷ ಸಾರಿಗೆ ಬಸ್ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.28:
ಯಾದಗಿರಿ ಜಿಲ್ಲೆಯ ತಿಂಥಣಿಯಲ್ಲಿ ಶ್ರೀ ಮೌನೇಶ್ವರ ಜಾತ್ರೆಯು ಜ.28 ರಿಂದ ಫೆ.3ರವರೆಗೆ ಜರುಗಲಿದೆ.
ಜಾತ್ರೆಗೆ ತೆರಳುವ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ‌ ಮೂಲಕ ವಿಜಯಪುರ ವಿಭಾಗದ ಸಿಂದಗಿ, ಮುದ್ದೇಬಿಹಾಳ ಮತ್ತು ತಾಳಿಕೋಟೆ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ ಸಾರಿಗೆ ಕಾರ್ಯಾಚರಣೆ ಮಾಡಲಿವೆ.
ಪ್ರಯಾಣಿಕರು ಈ ಬಸ್ ಸಾರಿಗೆ ಉಪಯೋಗ ಪಡೆದುಕೊಳ್ಳಬಹುದು. ಸಾರಿಗೆ ಸೌಲಭ್ಯ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಿಂದಗಿ ಘಟಕ ವ್ಯವಸ್ಥಾಪಕರು ಮೊ.7760992266, ಮುದ್ದೇಬಿಹಾಳದ ಘಟಕ ವ್ಯವಸ್ಥಾಪಕರ ಮೊ: 7760992267,ತಾಳಿಕೋಟಿ ಘಟಕ ವ್ಯವಸ್ಥಾಪಕರು
ಮೊ.7760992268 ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this