ಸಪ್ತಸಾಗರ ವಾರ್ತೆ, ವಿಜಯಪುರ, ಅ. 31: ಭಾರತೀಯ ಜನತಾ ಪಕ್ಷದ ವತಿಯಿಂದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜಯಂತಿ ಆಚರಿಸಲಾಯಿತು.
ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪಾಂಜಲಿ ಸಲ್ಲಿಸುವ ಮೂಲಕ ನಮನ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಸರ್ದಾರ ವಲ್ಲಭಾಯಿ ಪಟೇಲ್ ಉಕ್ಕಿನ ಮನುಷ್ಯರೆಂದೆ ಖ್ಯಾತಿ, ದೇಶದ ಸ್ವಾತಂತ್ರ್ಯಕ್ಕಾಗಿ ಮಹೋನ್ನತ ಕೊಡುಗೆ ನೀಡಿದ ಮಹಾನ್ ಚೇತನ, ಹೈದರಾಬಾದ್ ವಿಮೋಚನೆಗಾಗಿ ದಿಟ್ಟವಾದ ಸೈನ್ಯ ಕಾರ್ಯಾಚರಣೆ ನಡೆಸಿ ಅದನ್ನು ದೇಶದ ಭಾಗವಾಗಿಸಿದರು. ಅನೇಕ ಪ್ರಾಂತ್ಯಗಳು ಭಾರತದ ಒಕ್ಕೂಟ ಸೇರುವ ನಿಟ್ಟಿನಲ್ಲಿ ಅವರು ವಹಿಸಿದ ಕಾರ್ಯ ಅನನ್ಯ. ಅವರೊಬ್ಬರು ಧೀಮಂತ ಜನನಾಯಕ. ಈ ಕಾರಣಕ್ಕಾಗಿಯೇ ಅವರ ಬೃಹತ್ ಪ್ರತಿಮೆಯನ್ನು ಬಿಜೆಪಿ ಸರ್ಕಾರ ಅವಧಿಯಲ್ಲಿ ಸ್ಥಾಪಿಸಲಾಗಿದೆ. ಅವರ ಆದರ್ಶಗಳು ನಮಗೆ ಮಾರ್ಗದರ್ಶಿ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ, ಡಾ.ಸುರೇಶ ಬಿರಾದಾರ, ಶಿವರುದ್ರ ಬಾಗಲಕೋಟ, ಶಂಕರಗೌಡ ಪಾಟೀಲ, ಶ್ರೀಧರ ಬಿಜ್ಜರಗಿ, ಬಸವರಾಜ ಬೈಚಬಾಳ, ಕೃಷ್ಣಾ ಗುನ್ನಾಳಕರ, ರಮೇಶ ಬಿದನೂರು, ಸಂದೀಪ್ ಪಾಟೀಲ, ಪಾಪುಸಿಂಗ್ ರಜಪೂತ, ಚಿನ್ನು ಚಿನ್ನಗೊಂಡ, ಡಾ. ಮಲ್ಲನಗೌಡ ಬಿರಾದಾರ, ಮಲ್ಲಿಕಾರ್ಜುನ ಕಲಾದಗಿ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ವತಿಯಿಂದ ವಲ್ಲಭಾಯಿ ಪಟೇಲ್ ಜಯಂತಿ


