ಸಪ್ತಸಾಗರ ವಾರ್ತೆ ವಿಜಯಪುರ, ಜೂ. 11:
ಕೋ.ಚನ್ನಬಸಪ್ಪನವರ 2026ರ ರಾಜ್ಯ
ಮಟ್ಟದ ದತ್ತಿ ಪ್ರಶಸ್ತಿಯನ್ನು ಗ್ರಾಮೀಣ ಮಹಿಳೆ ಕವಿ, ಲೇಖಕಿ
ರೂಪಾ ರಜಪೂತ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.
ಗೌರವ ಕಾರ್ಯದರ್ಶಿಗಳಾದ ಡಾ.
ಮಾಧವ ಗುಡಿ, ಶಿಲ್ಪಾ ಭಸ್ಮೆ ಗೌರವ ಕೋಶಾಧ್ಯಕ್ಷರಾದ
ಅಭಿಷೇಕ ಚಕ್ರವರ್ತಿ, ಮಹಾದೇವಿ ತೆಲಗಿ ಆಯ್ಕೆ ಸಮಿತಿಯಲ್ಲಿ
ಉಪಸ್ಥಿತರಿದ್ದರು.
ಜೂ. 14ರಂದು ಜಿಲ್ಲಾ ಕನ್ನಡ ಸಾಹಿತ್ಯ
ಪರಿಷತ್ತಿನ ಸಭಾಂಗಣದಲ್ಲಿ ರಾಜ್ಯಮಟ್ಟದ ದತ್ತಿ ನಿಧಿ ಪ್ರಶಸ್ತಿ
ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋ.ಚನ್ನಬಸಪ್ಪ ರಾಜ್ಯ ದತ್ತಿಪ್ರಶಸ್ತಿಗೆ ಸಾಹಿತಿ ರೂಪಾ ರಜಪೂತ ಆಯ್ಕೆ


