ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿದ ಪ್ರಚೋದನೆಕಾರಿ ಹೇಳಿಕೆ ವಿರೋಧಿಸಿ ಒಂದು ಕೋಮಿನ ಯುವಕರು ಯತ್ನಾಳ್ ಕಾರಿಗೆ ಅಡ್ಡಗಟ್ಟಿ ಕಪ್ಪು ಬಟ್ಟೆ ಪ್ರದರ್ಶನ ನಡೆಸಿದ ಘಟನೆ ಭಾನುವಾರ ಆಲಮೇಲದಲ್ಲಿ ನಡೆದಿದೆ.
ಇತ್ತೀಚೆಗೆ ಕೊಪ್ಪಳದಲ್ಲಿ ಯತ್ನಾಳ್ ಅವರು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಕೊಡುತ್ತೇವೆ ಎಂದು ಘೋಷಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದರು.
ಈ ಹೇಳಿಕೆ ವಿರೋಧಿಸಿ ಮುಸ್ಲಿಂ ಯುವಕರು ಯತ್ನಾಳ್ ಕಾರಿಗೆ ಅಡಗಟ್ಟಿ ಮುತ್ತಿಗೆ ಹಾಕಿ ಕಪ್ಪು ಬಟ್ಟೆ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಯತ್ನಾಳ್ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದ್ದು, ಏಕಾಏಕಿ ಯುವಕರ ಗುಂಪು ಯತ್ನಾಳ್ ಕಾರಿನತ್ತ ತೆರಳಿದೆ. ಅಲ್ಲೇ ಯುವಕನೋರ್ವ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಸ್ಥಳೀಯ ಮುಖಂಡರು ಸೇರಿ ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕನಿಗೆ ಥಳಿಸಿದ್ದಾರೆ. ನಂತರ, ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯತ್ನಾಳ್ ಕಾರ್ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶನ: ಯುವಕರನ್ನು ವಶಕ್ಕೆ ಪಡೆದ ಪೊಲೀಸರು
